Monday, December 8, 2008

ಶ್ಯಾನುಬೋಗರ ಮಗಳು

ಶ್ಯಾನುಬೋಗರ ಮಗಳು ತಾಯಿ ಇಲ್ಲದ ಹುಡುಗಿ

ರತ್ನದಂತಹದ ಹುಡುಗಿ ಊರಿಗೆಲ್ಲ

ಬಲು ಜಾಣೆ ಗಂಬಿರೇ ಹೆಸರು ಸೀತಾದೇವಿ

ಹನ್ನೆರಡು ತುಂಬಿಹುದು ಮದುವೆಇಲ್ಲ



ತಾಯಿಇಲ್ಲಾದ ಹೆಣ್ಣು ಮಿಂಚ ಬೀರುವ ಕಣ್ಣು

ಒಮ್ಮೊಂಮ್ಮೆ ಕಣ್ಣೀರು ಸುರಿಸೀಹಿಹುದು

ತಾಯಿ ಎಂದುದುಬಂಧು ತಂಪಾ ನೆರೆಹುವದೆಂದು

ಇಂಥ ಬಾಳಿಗೆ ಹೊಳವೆನಿನ್ನ ಕನಸು ॥ಶ್ಯಾನುಬೋಗರ ಮಗಳು॥



ಅತ್ತಿರದ ಕೆರೆಯಿಂದ ತೊಳೆದ ಬಿಂದಿಗೆಯೊಳಗೆ

ನೀರು ತರುವಾಗ ಅವಳ ನೋಡಬೇಕು

ಕರುವಣಡಿಸುವಾಗ ಮಲ್ಲಿಗೆಯ ಬನಧೊಲಗೆ

ಅವಳ ಗಂಡನ ಹೆಸರ ಕೇಳಬೇಕು ॥ಶ್ಯಾನುಬೋಗರ ಮಗಳು॥



ಮೊನ್ನ್ನೆ ತಾವಗೆರೆಯ ಜೋಯಿಸರ ಮೊಮ್ಮಗನು

ಹೆಣ್ಣ ನೋಡಲು ಬಂದ ಅವರ ಮನೆಗೆ

ವ್ಹಿಧಿಕರ ಮನೆಗಳಲ್ಲಿ ಊಟ ಹೊತ್ತಾಗುವದು

ಒಲ್ಲೆ ನೆಂದಳೂ ಸೀತೆ ಕೋಣೆಯೊಳಗ

ಮಗಳ ಮಾತನು ಕೇಳಿ ನಕ್ಕುಬಿಟ್ಟರು ತಂದೆ

ಒಳಗೆ ನಾಂಧಾ ದೀಪಾ ನಂಧಿ ಹೋಗಿ

ಹಲವ ನುಡಿಧುದೂ ಹಲ್ಲಿ ಏಳಳೆನಿದೆ ಮುಂದೆ

ತೆರಳಿದನು ಜಾಯಿಸನು ತಣ್ಣಗಾಗಿ ॥ಶ್ಯಾನುಬೋಗರ ಮಗಳು॥



ಬೆಳಗದ ಕೆರೆಯಾಬಲಿ ನನ್ನ ತಂಗಿಯ ಕಂಡು

ಕನ್ನೆ ತೋರಿದಲಾಂತೆ ಕಾರಣವನು

ಹೊನ್ನೂರ ಕೆರಿಯಿಂದ ಬನ್ದಿದ್ದ ಹೊಸ ಗಂಡು

ತನ್ನ್ನ ಕುದಲಿಗಿನ್ಥ್ತ ಕಪ್ಪು ಎನ್ಧು

ನಮ್ಮೂರಿನ ಅಕ್ಕರೆಯ ಸಕ್ಕರೆಯ ಗೊಂಬೆಯನು

ನೋಡಬೇಕು ಅಂತ ಕಪ್ಪು ಗಂಡು

ಶ್ಯಾನುಬೋಗರ ಮನೆಯ ತೋರಣವೇ ಏಳುವದು

ಬಂದ ದಾರಿಗೆ ಸುಂಕಾ ಇಲ್ಲಯೆನ್ದು ॥ಶ್ಯಾನುಬೋಗರ ಮಗಳು॥



ಶ್ಯಾನುಬೋಗರ ಮಗಳು ತಾಯಿ ಇಲ್ಲದ ಹುಡಿಗಿ

ರತ್ನದನಥಹದ ಹುಡುಗಿ ಊರಿಗೆಲ್ಲ

ಗಂಡು ಸಿಕ್ಕುವದೋಂದು ಕಸ್ಟವಲ್ಲ

ಸರಿಯಾದ ಗನ್ದನೊನ್ದಿಗೆ ಹೆಣ್ಣು ಸುಕವಾಗಿರಲು

ತಡವಾದರೇನಂತೆ ನಸ್ಟಯಿಲ್ಲ

ತಡವಾದರೇನಂತೆ ನಸ್ಟಯಿಲ್ಲ

ತಡವಾದರೇನಂತೆ ನಷ್ಟಯಿಲ್ಲ.

ಒಂದು ಮುಂಜಾವಿನಲಿ

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ

ಸೋ ಎಂದು ಶೃತಿ ಹಿಡಿದು ಸುರಿಯುತ್ತಿತ್ತು

ಅದಕೆ ಹಿಮ್ಮೇಳವನೆ ಸೂಸಿ ಬಹ ಸುಳಿಗಾಳಿ

ತೆಂಗು ಗರಿಗಳ ನಡುವೆ ನುಸುಳುತ್ತಿತ್ತು || ಒಂದು ||



ಇಳೆ ವೆಣ್ನು ಮೈದೊಳೆದು ಮಕರಂದದರಿಷಿನದಿ

ಹೂ ಮುಡಿದು ಮಧುಮಗಳ ಹೋಲುತ್ತಿತ್ತು

ಮೂಡಣದಿ ನೇಸರನ ನಗೆಮೊಗದ ಶ್ರೀಕಾಂತಿ

ಬಿಳಿಯ ಮೋಡದ ಹಿಂದೆ ಹೊಳೆಯುತ್ತಿತ್ತು || ಒಂದು ||



ಹುಲ್ಲೆಸಳು ಹೂಕಪಳೆ ಮುತ್ತು ಹನಿಗಳ ಮಿಂಚು

ಸೊಡರಿನಲಿ ಆರತಿಯ ಬೆಳಗುತ್ತಿತ್ತು

ಕೊರಲುಕ್ಕಿ ಹಾಡುತಿಹ ಚಿಕ್ಕ ಪಕ್ಕಿಯ ಬಳಗ

ಶುಭಮಸ್ತು ಶುಭಮಸ್ತು ಎನ್ನುತ್ತಿತ್ತು || ಒಂದು ||



ತಳಿರ ತೋರಣದಲ್ಲಿ ಬಳ್ಳಿ ಬಾಣಗಳಲ್ಲಿ

ದುಂಬಿಗಳ ಓಂಕಾರ ಹೊಮ್ಮುತ್ತಿತ್ತು

ಹಚ್ಚ ಹಸುರಿನ ಪಚ್ಚೆ ನೆಲಗಟ್ಟಿನಂಗಳದಿ

ಚಿಟ್ಟೆ ರಿಂಗಣದುಣಿತ ಹಾಕುತ್ತಿತ್ತು || ಒಂದು ||



ಉಷೆಯ ನುಂಟದಪಿನಲಿ ಹರ್ಷ ಬಾಷ್ಪಗಳಂತೆ

ಮರದ ಹನಿ ತಟಪಟನೆ ಉದುರುತ್ತಿತ್ತು

ಸೃಷ್ಟಿ ಲೀಲೆಯೊಳಿಂತು ತಲ್ಲೀನವಾದ ಮನ

ಮುಂಬಾಳ ಸವಿಗನಸ ನೆನೆಯುತ್ತಿತ್ತು || ಒಂದು ||

Saturday, June 21, 2008

ಕೆ.ಪಿ. ಪೂರ್ಣಚಂದ್ರ ತೇಜಸ್ವಿ

ಕೆ.ಪಿ. ಪೂರ್ಣಚಂದ್ರ ತೇಜಸ್ವಿ
ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗು ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗು ಸ್ವತಂತ್ರ ಪ್ರವೃತ್ತಿಯ ಬರಹಗಾರರು. ಇವರು ೧೯೩೮ ಸೆಪ್ಟೆಂಬರ್ ೮ ರಂದು ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿಯಲ್ಲಿ ಜನಿಸಿದರು. ಸಾಹಿತ್ಯದ ಜೊತೆಗೆ ಇವರಿಗೆ ವ್ಯವಸಾಯ, ಛಾಯಾಚಿತ್ರಗ್ರಹಣ ಹಾಗು ಬೇಟೆಯಲ್ಲಿ ಆಸಕ್ತಿಯಿದೆ. ಇವರು ರೈತ ಚಳುವಳಿಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು
ಕವಿತೆ, ನಾಟಕ, ಕಾದಂಬರಿ, ಕತೆ ಮೊದಲಾದ ಸಾಹಿತ್ಯಕ ಪ್ರಕಾರಗಳಲ್ಲಿ ಲೇಖನಿ ಓಡಿಸಿದ್ದಾರೆ. "ಸೋಮುವಿನ ಸ್ವಗತಲಹರಿ ಮತ್ತು ಇತರ ಕವನಗಳು", "ಬೃಹನ್ನಳೆ", ಇವರ ಕವನ ಸಂಕಲನಗಳು. "ಅಬಚೂರಿನ ಪೋಸ್ಟಾಫೀಸು", "ಹುಲಿಯೂರಿನ ಸರಹದ್ದು" ಇವರ ಕಥಾ ಸಂಗ್ರಹಗಳು. "ಚಿದಂಬರ ರಹಸ್ಯ", "ಕರ್ವಾಲೋ", "ಕಿರಿಗೂರಿನ ಗಯ್ಯಾಳಿಗಳು" ಇವರ ಕಾದಂಬರಿಗಳು. "ವ್ಯಕ್ತಿ ವಿಶಿಷ್ಟ ಸಿದ್ಧಾಂತ", ತೇಜಸ್ವಿ ಅವರ ಒಂದು ಚಿಂತನ ಮಂಥನ ವೈಚಾರಿಕ ಕೃತಿ.
ಇವರು ತಮ್ಮ ಮಲೆನಾಡು ಜೀವನದ ಅನುಭವದಿಂದ ಬರೆದ ಕೃತಿಗಳು 'ಪರಿಸರದ ಕಥೆ' ಮತ್ತು 'ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು'.
ಹಲವಾರು ಆಂಗ್ಲ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಇದರಲ್ಲಿ ಕೀಟಗಳು, ಪ್ರಾಣಿಗಳು, ನದಿ ಕೊಳ್ಳಗಳು, ಕಾಡುಗಳು, ಬೇಟೆಯ ವೈವಿಧ್ಯತೆಯಬಗ್ಗೆ ಹಲವಾರು ಕೃತಿಗಳನ್ನು ನೀಡಿದ್ದಾರೆ. ಇವರ "ಕರ್ವಾಲೋ" ಕೃತಿಯಲ್ಲಿ, ಜೀವವಿಕಾಸ ಪಥದಲ್ಲಿ ಎಲ್ಲವೂ ಬದಲಾಗುತ್ತ ರೂಪಾಂತರ ಹೊಂದುತ್ತಾ ಬಂದಿರುವಾಗ ಹಾರುವ ಓತಿಯ ಕುರಿತು ಕುತೂಹಲ ಹುಟ್ಟಿಸುವ ಸನ್ನಿವೇಶಗಳು ಮೂಡಿ ಬಂದಿವೆ.
ಶುಧ್ಧ ಸಾಹಿತ್ಯಿಕ ಮೌಲ್ಯ ಉಳ್ಳ ಕಥೆ ಕಾದಂಬರಿಗಳ ಸಂಗಡ ತೇಜಸ್ವಿಯವರು ಹಲವಾರು ವೈಜ್ಞಾನಿಕ ಹಾಗು ಐತಿಹಾಸಿಕ ಸಂಕಲನಗಳನ್ನು ಕನ್ನಡಕ್ಕೆ ತಂದಿದ್ದಾರೆ. ಮಹಾಯುಧ್ಧ, ಹಾರುವ ತಟ್ಟೆಗಳು, ಮಹಾನದಿ ನೈಲ್ ಇತ್ಯಾದಿ.
ಅಲೆಮಾರಿಯ ಅಂಡಮಾನ್ ತೇಜಸ್ವಿಯವರ ಅಂಡಮಾನ್ ಪ್ರವಾಸ ಕಥನ. ಈ ಕೃತಿಯು ಕನ್ನಡ ಪ್ರವಾಸ ಕಥನಗಳಲ್ಲೇ ವಿಶಿಷ್ಠ ಸ್ಥಾನವನ್ನು ಪಡೆದುಕೊಂಡಿದೆ.

[ಬದಲಾಯಿಸಿ] ಗೌರವ, ಪ್ರಶಸ್ತಿಗಳು
ಪೂರ್ಣಚಂದ್ರ ತೇಜಸ್ವಿ ಅವರು ಬರೆದಿರುವ "ಅಬಚೂರಿನ ಪೋಸ್ಟಾಫೀಸು", "ತಬರನ ಕಥೆ" ಕೃತಿಗಳು ಚಲನಚಿತ್ರಗಳಾಗಿ ಪ್ರಶಸ್ತಿ ಗಳಿಸಿವೆ. "ಕುಬಿ ಮತ್ತು ಇಯಾಲ" ಚಿತ್ರವು ರಾಷ್ಟ್ರ ಪ್ರಶಸ್ತಿ ಗಳಿಸಿತು. "ಚಿದಂಬರ ರಹಸ್ಯ" ಪತ್ತೇದಾರಿ ವಿಧಾನದ ವಸ್ತು ಹೊಂದಿದ್ದು ಈ ಕಾದಂಬರಿಗೆ ವರ್ಷದ ಉತ್ತಮ ಕೃತಿ ಬಹುಮಾನ ದೊರೆತುದಲ್ಲದೆ, ೧೯೮೭ರಲ್ಲಿ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರಾಪ್ತವಾಯಿತು. ಕರ್ನಾಟಕ ಸಾಹಿತ್ಯ ಅಕಾಡಮಿಯೂ ಸಹ ಅದೇ ವರ್ಷ ತೇಜಸ್ವಿ ಅವರಿಗೆ ಗೌರವ ಪ್ರಶಸ್ತಿ ನೀಡಿದೆ.
ನಾಲ್ಕು ದಶಕಗಳ ಕಾಲ ಕಥೆ, ಕಾದಂಬರಿಗಳ ಮೂಲಕ, ವಿಜ್ಞಾನದ ವಿಸ್ಮಯಗಳ ಮೂಲಕ ತೇಜಸ್ವಿಯವರು ಕನ್ನಡ ಸಾಹಿತ್ಯಕ್ಕೆ ಆನೇಕ ಮಹತ್ವಪೂರ್ಣ ಕೃತಿಗಳನ್ನು ನೀಡಿದ್ದಾರೆ.

[ಬದಲಾಯಿಸಿ] ಕೃತಿಗಳು
ಮಾಯಾಲೋಕ
ಪರಿಸರದ ಕತೆ
ರುದ್ರಪ್ರಯಾಗದ ಭಯಾನಕ ನರಭಕ್ಷಕ - ಜಿಮ್ ಕಾರ್ಬೆಟ್‍ರವರ 'Man eating Leapord of Rudraprayag' ಕೃತಿಯ ಅನುವಾದ.
ಅಬಚೂರಿನ ಪೋಸ್ಟಾಫೀಸು
ತಬರನ ಕಥೆ
ಚಿದಂಬರ ರಹಸ್ಯ
ಕರ್ವಾಲೋ
ಅಣ್ಣನ ನೆನಪು
ಜುಗಾರಿ ಕ್ರಾಸ್
ಮಿಸ್ಸಿಂಗ್ ಲಿಂಕ್
ಕಿರಿಗೂರಿನ ಗಯ್ಯಾಳಿಗಳು
ಕಾಡಿನ ಕಥೆಗಳು (ಭಾಗ ೧-೪) - ಕೆನ್ನೆತ್ ಆಂಡರ್ಸನ್ ರವರ ಕಥೆಗಳ ಅನುವಾದ
ಪ್ಯಾಪಿಲಾನ್ - ಹೆನಿ್ರ ಛಾರೇರೆ ರವರ 'Papillon' ಕೃತಿಯ ಅನುವಾದ
ಅಲೆಮಾರಿಯ ಅಂಡಮಾನ್ ಹಾಗು ಮಹಾನದಿ ನೈಲ್

Monday, June 16, 2008

Tirumakudalu-Narasipura

Tirumakudalu-Narasipura , officially known as T.Narasipura [1],is a panchayat town in Mysore district in the Indian state of Karnataka. The first letter “T” of the name (T.Narasipura) refers to Tirumakudalu, the confluence of the Kaveri, Kabini and Spatika Sarovar (a hidden mythical lake or spring, also named Gupta Gamini)and the peninsular town at this location is also called Tirumakudlu (Trimakuta in Sanskrit). This is the only place in South India where three rivers meet, and the only place where Kumbhamela is held in south India every three years. It finds a mention in the Skanda Purana as one of the Trimakuta Kshetras (holy places with the confluence of three rivers.[2]. The word 'Narasipur' is the name of the town, which is derived from the famous Gunja Narasimhaswamy temple that is located on the right bank of the Kabini river. Considered as sacred as Prayag (confluence of the Ganga, the Yamuna and the Saraswati at PrayagVaranasi - Kashi in North India), it is also known as Dakshina Kashi. The town finds its mention, both as a tourist place and a pilgrimage centre.[edit] Mythology
It is said that Tirumakudlu is where Rishi Agasthya had visualised it as 'Dakshina Kashi' long long ago. When he travelled down South to Narsipur, the town was a thick forest. Enamoured by the confluence of the three rivers - Kaveri, Kapila and the undercurrent of Spatika Sarovara - he wanted to install a Shiva Lingam there and asked Hanuman to get him a lingam from Kashi. Since the auspicious period lasting three-and-a-three-fourth of a galige was fast approaching and Hanuman failed to get the lingam on time, the sage created a sand lingam himself and consecrated it. An insulted Hanuman, who returned soon, cut off the top portion of the lingam and from the axed summit does the Spatika Sarovara flow out even to this day. The lingam that Hanuman brought was consecrated a little distance away and is called the Hanuman Lingam.
The Someshwara and Markandeshwara Lingam in T Narsipur and the Gargeshwara Lingam at Gargeshwari village, along with the Agasthyeshwara and the Hanuman Lingam, form the panchalingas of T Narsipur, just like the five lingams at Talakad.
The legend associated with Gunja Narasimhaswamy Temple is that Lord Narasimhaswamy appeared in the dream of a washerman telling him that his idol lay beneath the stone on which he washed clothes everyday. The Lord told him to build a temple for him and asked him to look for gold coins beneath the stone which could be used for the construction of the temple. When the washerman expressed his wish to visit (Kashi) Varanasi on a pilgrimage, the Lord told him that the construction of a temple for Him had earned to him (washerman) an additional punya (blessing) of about a gulaganji (seed of a twig tree) than that which accrues by visiting Kashi.

[edit] Archeological Significance
T. Narasipur and its surrounding areas are prehistoric sites where many Neolithic sites have been unearthed by the Department of Archeology and Museums of Karnataka. The rich and fertile areas of the taluk cultivated by the Kaveri and its tributaries, has been the source of continued uninhibited human habitation, over the centuries, as verified by the ancient archeological evidences discovered in the area. The ancient sites excavated in the late fifties and up to mid sixties (between 1959 and 1965) on the left bank of the Kaveri near the Bhiksheswara Temple opposite to the Narasipur town, which form part of the Upper Kaveri basin, has established the Neolithic phase in the region claiming a date from the first half of second millennium B.C which saw the gradual evolution of the peasants into food producing and settled communities responsible for the growth of civilization. The systematic ground excavations comprising burial ground remnants, potteries, graffiti, stone implements, metal objects, beads and bangles, animal remains, human remains, wood remains, etc examined in depth and in great detail have revealed four cultural phases at the sites, but the most outstanding phase has been deduced as the Neolithic phase.
An authoritative report on the “Excavations at T.Narasipur” by Prof M.Seshadri, Director of Archeology of Mysore published in 1971 provides a detailed insight into the ancient pre-historic civilizational bearings of T.Narasipur town and its surroundings[3].

[edit] Demographics
As of 2001 India census[3], Tirumakudal-Narsipur had a population of 9930. Males constitute 50% of the population and females 50%. Tirumakudal-Narsipur has an average literacy rate of 66%, higher than the national average of 59.5%: male literacy is 73%, and female literacy is 59%. In Tirumakudal-Narsipur, 11% of the population is under 6 years of age.

[edit] Access
T. Narasipur is the taluk headquarters in Mysore District of Karnataka state, India. It is 29 km South-East of Mysore, the district headquarters and 130 km from Bangalore, the state capital. Nearest airport is Bangalore International Airport. Mysore Junction Railway Station and Nanjangud Town Railway Station are the nearest railheads. National Highway 212 passes through the area.

[edit] Temples
It is a place of religious prominence. The Gunja Narasimha Swamy temple is a massive complex belonging to the Vijayanagar period. The image of Narasimha in the sanctum sanctorum has a twig with seed of the Gunja tree and hence is called Gunja Narasimha Swamy. The temple has inscriptions dating from the Krishnadevaraya period with a mélange of Dravidian and Hoysala Architecture and is renowned for the voluminous records in Nagari script. The temple more than 450 years old, which is in need of repair and restoration, is now being renovated by a donor - Dr N.V.Ramanuja Iyengar- an NRI.[1]
Apart from the Gunja Narasimha Swamy temple, there are many other temples such as the Agasthyeshwara temple (Sage Agasthya founded and sanctified the Agasthyeshwara temple.This temple complex contains many monuments belonging to the Ganga, Chola, Hoysala and Vijayanagara periods at Thirumakudlu, the Bhiksheswara temple, the Moolasthaneshwara temple and the Anandeswara temple in the surrounding area.[4]

[edit] Religious festivals
The chariot festivals of Gunja Narasimha Swamy and Agastheswara, conducted every year, are attended by thousands of people.
The Kumbha Mela of T. Narasipur,[2] of recent origin, since 1989, is an event that occurs once in three years. Organised by the Kumbha Mela Trust under the auspices of senior pontiffs and religious leaders of the State, the congregation is meant to underline the concept of unity in diversity. The Kumbha Mela of Allahabad and Nasik is replicated at T. Narasipur when lakhs of devotees congregate and take a holy dip in the confluence of three rivers. A slice of ancient India unfolds as ochre-clad sadhus join people to take a dip at the confluence of the Kaveri, the Kabini, and the celestial lake "Spatika Sarovar".

[edit] Industries
Silk Filature at T.Narasipur[3] is a raw silk manufacturing unit. The unit manufactures raw silk yarn and transfer to meet the raw material requirement of silk weaving factory in Mysore. The factory supplies raw silk yarn to its own silk weaving factory located in Mysore. Approximately 1000 Kilograms of cocoons are purchased daily from Govt. Controlled Market depending on needs and raw silk yarn known as filatures are produced. The purchase is done on almost daily basis, as the purchased cocoon cannot be stored for more than 2 to 3 days.
Sand extraction from the river bed is an activity which has caused increased river bank erosion, and frequent public protests are a common feature against this operation to no avail.

[edit] Nearby places
Somanathapura, about 32 km East of Mysore by road and about 14 km from T.Narasipur, a village on the left bank of the river Cauvery is famous for Sri Venugopalaswamy temple and Sri Channakeshava temple built here in 1269 A.D & 1268 A.D by the Hoysla King Narasimha with exquisite carvings. These temples are good examples of the Hoysala architecture and are of great architectural and artistic interest.
Talakad an ancient town, situated on the left bank of the river Cauvery, is 45 km South East of Mysore or 5 km from T.Narasipur. Sri Kirtinarayana, Sri Kartikeya, Sri Vaideeswara, Sri Pataleswara and Sri Maraleswara temples are located in this town. Many more monuments lie buried in the barren expanse of sand dunes in the town.
This place is also tagged to the curse called “Curse of Talakad[5] by Alamelamma on the Wodeyar dynasty (erstwhile Maharajas) of Mysore. The curse which has survived the folklore of last four hundred years is known thus:
-May Malangi turn into an unfathomed whirlpool
-May Talakad turn into a barren expanse of sand
-May the Rajas of Mysore not have children for all time to eternity!
Sosale is another important religious centre because of the famous Vyasraja mutt of the Madhva sect established there by Vysarajathirtha. It is located about 3 km from T.Narasipur.

Sunday, June 15, 2008

The Elephanta Caves

The Elephanta Caves are the focal point of Gharapuri Island, which was renamed the Elephanta Island by the Portuguese, located in the Mumbai harbour off the coast of Mumbai (Bombay), India. In 1987, the caves were designated a UNESCO World Heritage Site.
It is visited by many domestic and foreign tourists. In recent years, complaints have been made that visitors mistreat this important cultural and historic site.[1][2] Most of the sculptures here were defaced by the Portuguese, who used the sculptures as target practice in the 17th century. The Portuguese also gave the island its modern name, Elephanta from Gharapuri.[3]The caves are thought to date back to the Silhara kings of the 9th through 13th centuries (8101260).[citation needed] Some of the sculptures of this site are also attributed to the imperial Rashtrakutas of Manyakheta (in present day Karnataka), the Trimurti of Elephanta showing the three faces of Shiva almost akin to the Trinity of Brahma, Vishnu, and Mahesh. This was also the royal insignia of the Rashtrakutas. Other Rashtrakuta sculptures here are the reliefs of Nataraja and Sadashiva and the splendid sculptures of Ardhanarishvara.[citation needed]
The rock-cut temple complex cover an area of 60,000 sq ft consisting of a main chamber, 2 lateral ones, courtyards and subsidiary shrines. The site of these magnificent caves contained beautiful reliefs, sculptures, and a temple to the Hindu god Śiva. The caves are hewn from solid rock.[4] The temple complex is said to be the abode of Shiva.The most important sculpture is that of Trimurti Sadasiva, carved in relief at the end of the N-S axis. The image, 20 ft in height is of the three headed-Shiva, representing Panchamukha Shiva.[5] The right half-face shows him as a young person with sensuous lips, embodying life and its vitality. In his hand he holds something that resembles a rose bud -- again with the promise of life and creativity. It is this face that is closest to that of Brahma, the creator or Uma or Vamadeva,the feminine side of Shiva.[6] The left half-face face on the side is that of a young man. It is moustached, and displays anger. This is Shiva as Aghora Bhairava[7], as the one whose anger can engulf the entire world in flames leaving only ashes behind. This is Shiva, the Destroyer. The central face, benign, meditative, as the preserver Vishnu. This is Shiva as the yogi -- Yogeshwar -- in deep meditation praying for the 'preservation' of humanity.

Friday, June 6, 2008

Saturday, May 24, 2008

ವಿಶ್ವಮಾನವ ಸ೦ದೇಶ

ವಿಶ್ವಮಾನವ ಸ೦ದೇಶ

ಪ೦ಚಮ೦ತ್ರ ಮತ್ತು ಸಪ್ತಸೂತ್ರ

“ಮರ್ತ್ಯಜೀವನದ ತಾಟಸ್ಥ್ಯಮ೦ ಕಡೆಕಡೆದು
ಶ್ರದ್ಧೆ ಸ೦ದೇಹಗಳನಿರದೆ ಹೊಡೆದೆಬ್ಬಿಸುವ,
ಮೇಣ್ ಜನತೆ ಜನತೆಯೊಳ್ ಪಕ್ಷಪಕ್ಷ೦ಗಳ೦
ಕೆರಳಿಸುವ ಶತಶತ ಮತ೦ಗಳ೦ ತಾಮಲ್ಲಿ
ರಾರಾಜಿಸಿದುವಗ್ನಿವರ್ಣದ ವೃಕ೦ಗಳೋಲ್,
ಜೋಲ್ವ ಜಿಹ್ವೆಯೊಳತಿ ಭಯಾನಕ೦-!”

ಅಭಿಷೇಕ ವಿರಾಡ್ ದರ್ಶನ೦ - ೧೪೭-೧೫೨
ಶ್ರೀರಾಮಾಯಣದರ್ಶನ೦, ಶ್ರೀ ಸ೦ಪುಟ. ಸ೦.೧೩



ಪ್ರತಿಯೊ೦ದು ಮಗುವೂ ಹುಟ್ಟುತ್ತಲೇ ವಿಶ್ವಮಾನವ, ಬೆಳೆಯುತ್ತಾ ನಾವು ಅದನ್ನು ಅಲ್ಪಮಾನವನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ‘ವಿಶ್ವಮಾನವ’ನನ್ನಾಗಿ ಮಾಡುವುದೆ ವಿದ್ಯೆಯ ಕರ್ತವ್ಯವಾಗಬೇಕು.

ಹುಟ್ಟುವಾಗ ‘ವಿಶ್ವಮಾನವ’ನಾಗಿಯೆ ಹುಟ್ಟಿದ ಮಗುವನ್ನು ನಾವು ದೇಶ, ಭಾಷೆ, ಮತ, ಜಾತಿ, ಜನಾ೦ಗ, ವರ್ಣ ಇತ್ಯಾದಿ ಉಪಾಧಿಗಳಿ೦ದ ಬದ್ದನನ್ನಾಗಿ ಮಾಡುತ್ತೇವೆ. ಅವೆಲ್ಲವುಗಳಿ೦ದ ಪಾರಾಗಿ ಅವನನ್ನು ‘ಬುದ್ಧ’ನನ್ನಾಗಿ, ಅ೦ದರೆ ವಿಶ್ವಮಾನವನನ್ನಾಗಿ ಪರಿವರ್ತಿಸುವುದೇ ನಮ್ಮ ವಿದ್ಯೆ, ಸ೦ಸ್ಕೃತಿ, ನಾಗರೀಕತೆ ಎಲ್ಲದರ ಆದ್ಯ ಕರ್ತವ್ಯವಾಗಬೇಕು. ಪ್ರಪ೦ಚದ ಮಕ್ಕಳೆಲ್ಲ ‘ಅನಿಕೇತನ’ರಾಗಬೇಕು, ಲೋಕ ಉಳಿದು, ಬಾಳಿ ಬದುಕಬೇಕಾದರೆ! ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರೈಸಲು ಮಹಾಪುರುಷರು ಸ೦ಭವಿಸಿ ಹೋಗಿದ್ದಾರೆ. ಆವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪುಗೊ೦ಡು ಕಡೆಗೆ ಮತವಾಗಿ ಪರಿಮಿತವಾಯಿತು. ಮಾನವರನ್ನು ಕೂಡಿಸಿ ಬಾಳಿಸಬೇಕೆ೦ಬ ಉದ್ದೇಶದಿ೦ದ ಹುಟ್ಟಿಕೊ೦ಡ ಮಹಾತ್ಮರ ವಾಣಿ ಮತವಾಗಿ ಮಾದಕವಾಯಿತು. ಒ೦ದು ಯುಗಕ್ಕೆ ಅಗತ್ಯವೆನಿಸಿದ ಧರ್ಮ ಕಾಲಾನುಕಾಲಕ್ಕೆ ಮತವಾಗಿ ನಿರುಪಯುಕ್ತವೆನಿಸಿ ಮತ್ತೊ೦ದು ಹೊಸ ಧರ್ಮಕ್ಕೆ ಯೆಡೆಗೊಟ್ಟುದೂ ಉ೦ಟು. ಹೀಗಾಗಿ ಅನೇಕ ಧರ್ಮಗಳು ಮತಗಳಾಗಿ ಜನತೆಯನ್ನು ಗು೦ಪುಗು೦ಪಾಗಿ ಒಡೆದಿವೆ. ಯುದ್ದಗಳನ್ನು ಹೊತ್ತಿಸಿದ್ದಿವೆ, ಜಗತ್ತಿನ ಕ್ಷೋಭೆಗಳಿಗೆಲ್ಲ ಮೂಲಕಾರಣವೆ೦ಬ೦ತೆ! ವಿಜ್ಞಾನಯುಗದ ಪ್ರಾಯೋಗಿಕ ದೃಷ್ಟಿಗೆ ಇನ್ನುಮೇಲೆ ಮತ ಮೌಢ್ಯ ಒಪ್ಪಿಗೆಯಾಗದು. ವಿನೋಬಾ ಭಾವೆಯವರು ಹಿ೦ದೆ ಹೇಳಿದ೦ತೆ ‘ಮತ ಮತ್ತು ರಾಜಕೀಯ ಕಾಲ ಆಗಿಹೋಯಿತು. ಇನ್ನೇನಿದ್ದರೂ ಆಧ್ಯಾತ್ಮ ಮತ್ತು ವಿಜ್ಞಾನದ ಕಾಲ ಬರಬೇಕಾಗಿದೆ.’

ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ

ಈ ಪ೦ಚಮ೦ತ್ರ ಇನ್ನು ಮು೦ದಿನ ದೃಷ್ಟಿಯಾಗಬೇಕಾಗಿದೆ. ಅ೦ದರೆ, ನಮಗೆ ಇನ್ನು ಬೇಕಾದುದು ಆ ಮತ ಈ ಮತ ಅಲ್ಲ; ಮನುಜ ಮತ. ಆ ಪಥ ಈ ಪಥ ಅಲ್ಲ; ವಿಶ್ವಪಥ. ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ; ಸರ್ವರ ಸರ್ವಸ್ತರದ ಉದಯ. ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ; ಸಮನ್ವಯಗೊಳ್ಳುವುದು. ಮಿತಮತದ ಆ೦ಶಿಕ ದೃಷ್ಟಿಯಿ೦ದ ಕಾಣುವ ಪೂರ್ಣದೃಷ್ಟಿ. ಯಾವ ಭಾವನೆಗಳು ಜಗತ್ತಿನಲ್ಲಿ ಎಲ್ಲ ಮಾನವರಿಗೂ ಅನ್ವಯವಾಗಬಹುದೊ ಅ೦ತಹ ಭಾವನೆ ಅ೦ತಹ ದೃಷ್ಟಿ ಬರಿಯ ಯಾವುದೋ ಒ೦ದು ಜಾತಿಗೆ, ಮತಕ್ಕೆ, ಗು೦ಪಿಗೆ, ಒ೦ದು ದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ. ಸರ್ವಕಾಲಕ್ಕೂ ಅನ್ವಯವಾಗುವ ಇವು ಮೂಲಮೌಲ್ಯಗಳು. ಈ ಮೌಲ್ಯಗಳು ಮಾನವರನ್ನು ಕೂಡಿಸಿ ಬಾಳಿಸುವತ್ತ ನಡೆದಾವು. ಗು೦ಪುಗಾರಿಕೆಗೆ೦ದೂ ಇವು ತೊಡಗುವುದಿಲ್ಲ; ಅದೇನಿದ್ದರೂ ರಾಜಕೀಯದ ಕರ್ಮ. ವ್ಯಕ್ತಿಸ್ವಾತ೦ತ್ರ್ಯವನ್ನು ನೀಡಿಯೂ ಸಮಷ್ಟಿಯ ಉದ್ಧಾರದ ದೃಷ್ಟಿ ಇದರದು. ಈ ದೃಷ್ಟಿಗೆ ವ್ಯಕ್ತಿಗಳೆಷ್ಟೊ ಅಷ್ಟೂ ಸ೦ಖ್ಯೆಯ ಮತಗಳಿರುವುದು ಸಾಧ್ಯ; ಅಷ್ಟೂ ವ್ಯಕ್ತಿಗಳು ಸಮಷ್ಟಿಯ ವಿಕಾಸಕ್ಕೆ ಸಾದಕವಾಗುವುದೂ ಸಾಧ್ಯ. ಈ ‘ದರ್ಶನ’ವನ್ನೆ ‘ವಿಶ್ವಮಾನವ ಗೀತೆ’ ಸಾರುತ್ತದೆ.

ವಿಶ್ವಮಾನವರಾಗಲು ನಾವು ಸಾಧಿಸಲೇಬೇಕಾದ ಮೂಲಭೂತ ಸ್ವರೂಪದ ತತ್ತ್ವಪ್ರಣಾಳಿಕೆ:

ಸಪ್ತಸೂತ್ರ


“ಮನುಷ್ಯಜಾತಿ ತಾನೊ೦ದೆ ವಲ೦” ಎ೦ಬುದನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು.

ವರ್ಣಾಶ್ರಮವನ್ನು ತುದ್ದುವುದಲ್ಲ, ಅದನ್ನು ಸ೦ಪೂರ್ಣವಾಗಿ ತೊಲಗಿಸಬೇಕು. ಅ೦ದರೆ ಬ್ರಾಹ್ಮಣ, ಕ್ಷತ್ರಿಯ, ವ್ಯೆಶ್ಯ, ಶೂದ್ರ, ಅ೦ತ್ಯಜ, ಷಿಯಾ, ಸುನ್ನಿ, ಕ್ಯಾಥೊಲಿಕ್, ಪ್ರಾಟಿಸ್ಟ೦ಟ್, ಸಿಕ್, ನಿರ೦ಕಾರಿ ಇತ್ಯಾದಿ ಇತ್ಯಾದಿ ವಿಭಜನೆಯನ್ನು ನಿರ್ನಾಮ ಮಾಡಬೇಕು.

ಎಲ್ಲ ದೇಶಗಳಲ್ಲಿ ಮತ್ತು ಎಲ್ಲ ಮತಗಳಲ್ಲಿರುವ ಜಾತಿಪದ್ದತಿಯನ್ನು ಸ೦ಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು.

‘ಮತ’ ತೊಲಗಿ ‘ಅಧ್ಯಾತ್ಮ’ ಮಾತ್ರ ವೈಜ್ಞಾನಿಕ ತತ್ವವಾಗಿ ಮಾನ್ಯತೆ ಪಡೆಯಬೇಕು.

ಮತ ‘ಮನುಜಮತ’ವಾಗಬೇಕು; ಪಥ ‘ವಿಶ್ವಪಥ’ವಾಗಬೇಕು; ಮನುಷ್ಯ ‘ವಿಶ್ವಮಾನವ’ನಾಗಬೇಕು.

ಮತ ಗು೦ಪುಕಟ್ಟುವ ವಿಷಯವಾಗಬಾರದು. ಯಾರೂ ಯಾವ ಒ೦ದು ಮತಕ್ಕೂ ಸೇರದೆ, ಪ್ರತಿಯೊಬ್ಬನೂ ತಾನು ಕ೦ಡುಕೊಳ್ಳುವ ‘ತನ್ನ’ ಮತಕ್ಕೆ ಮಾತ್ರ ಸೇರಬೇಕು. ಅ೦ದರೆ ಜಗತ್ತಿನಲ್ಲಿ ಎಷ್ಟು ವ್ಯಕ್ತಿಗಳಿದ್ದಾರೋ ಅಷ್ಟೇ ಸ೦ಖ್ಯೆಯ ಮತಗಳಿರುವ೦ತಾಗುತ್ತದೆ. ಯಾರೊಬ್ಬರೂ ಇನ್ನೊಬ್ಬರ ಮತಕ್ಕೆ ಸೇರಿ ಗು೦ಪುಕಟ್ಟಿ ಜಗಳ ಹಚ್ಚುವ೦ತಾಗಬಾರದು.

ಯಾವ ಒ೦ದು ಗ್ರ೦ಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರ೦ಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು

ವಿಶ್ವಮಾನವಗೀತೆ – ಅನಿಕೇತನ

ಓ ನನ್ನ ಚೇತನ,
ಆಗು ನೀ ಅನಿಕೇತನ!

ರೂಪರೂಪಗಳನು ದಾಟಿ,
ನಾಮಕೋಟಿಗಳನು ಮೀಟಿ,
ಎದೆಯ ಬಿರಿಯೆ ಭಾವದೀಟಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!

ನೂರು ಮತದ ಹೊಟ್ಟ ತೂರಿ,
ಎಲ್ಲ ತತ್ತ್ವದೆಲ್ಲೆ ಮೀರಿ,
ನಿರ್ದಿಗನ೦ತವಾಗಿ ಏರಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!

ಎಲ್ಲಿಯೂ ನಿಲ್ಲದಿರು;
ಮನೆಯನೆ೦ದೂ ಕಟ್ಟದಿರು;
ಕೊನೆಯನೆ೦ದೂ ಮುಟ್ಟದಿರು;
ಓ ಅನ೦ತವಾಗಿರು!
ಓ ನನ್ನ ಚೇತನ,
ಆಗು ನೀ ಅನಿಕೇತನ!

ಅನ೦ತ ತಾನ್ ಅನ೦ತವಾಗಿ
ಆಗುತಿಹನೆ ನಿತ್ಯಯೋಗಿ;
ಅನ೦ತ ನೀ ಅನ೦ತವಾಗು;
ಆಗು, ಆಗು, ಆಗು, ಆಗು,
ಓ ನನ್ನ ಚೇತನ,
ಆಗು ನೀ ಅನಿಕೇತನ!

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ

ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ


ಸೋ ಎಂದು ಶೃತಿ ಹಿಡಿದು ಸುರಿಯುತ್ತಿತ್ತು


ಅದಕೆ ಹಿಮ್ಮೇಳವನೆ ಸೂಸಿ ಬಹ ಸುಳಿಗಾಳಿ


ತೆಂಗು ಗರಿಗಳ ನಡುವೆ ನುಸುಳುತ್ತಿತ್ತು || ಒಂದು ||





ಇಳೆ ವೆಣ್ನು ಮೈದೊಳೆದು ಮಕರಂದದರಿಷಿನದಿ


ಹೂ ಮುಡಿದು ಮಧುಮಗಳ ಹೋಲುತ್ತಿತ್ತು


ಮೂಡಣದಿ ನೇಸರನ ನಗೆಮೊಗದ ಶ್ರೀಕಾಂತಿ


ಬಿಳಿಯ ಮೋಡದ ಹಿಂದೆ ಹೊಳೆಯುತ್ತಿತ್ತು || ಒಂದು ||





ಹುಲ್ಲೆಸಳು ಹೂಕಪಳೆ ಮುತ್ತು ಹನಿಗಳ ಮಿಂಚು


ಸೊಡರಿನಲಿ ಆರತಿಯ ಬೆಳಗುತ್ತಿತ್ತು


ಕೊರಲುಕ್ಕಿ ಹಾಡುತಿಹ ಚಿಕ್ಕ ಪಕ್ಕಿಯ ಬಳಗ


ಶುಭಮಸ್ತು ಶುಭಮಸ್ತು ಎನ್ನುತ್ತಿತ್ತು || ಒಂದು ||





ತಳಿರ ತೋರಣದಲ್ಲಿ ಬಳ್ಳಿ ಬಾಣಗಳಲ್ಲಿ


ದುಂಬಿಗಳ ಓಂಕಾರ ಹೊಮ್ಮುತ್ತಿತ್ತು


ಹಚ್ಚ ಹಸುರಿನ ಪಚ್ಚೆ ನೆಲಗಟ್ಟಿನಂಗಳದಿ


ಚಿಟ್ಟೆ ರಿಂಗಣದುಣಿತ ಹಾಕುತ್ತಿತ್ತು || ಒಂದು ||





ಉಷೆಯ ನುಂಟದಪಿನಲಿ ಹರ್ಷ ಬಾಷ್ಪಗಳಂತೆ


ಮರದ ಹನಿ ತಟಪಟನೆ ಉದುರುತ್ತಿತ್ತು


ಸೃಷ್ಟಿ ಲೀಲೆಯೊಳಿಂತು ತಲ್ಲೀನವಾದ ಮನ


ಮುಂಬಾಳ ಸವಿಗನಸ ನೆನೆಯುತ್ತಿತ್ತು || ಒಂದು ||

ಈ ಬಾನು ಈ ಚುಕ್ಕಿ ಈ ಹೂವು ಈ ಹಕ್ಕಿ

ಈ ಬಾನು ಈ ಚುಕ್ಕಿ ಈ ಹೂವು ಈ ಹಕ್ಕಿ

ತೇಲಿ ಸಾಗುವ ಮುಗಿಲು ಹರುಷ ಉಕ್ಕಿ

ಯಾರು ಇಟ್ಟರು ಇವನು ಹೀಗೆ ಇಲ್ಲಿ

ತುದಿಮೊದಲು ತಿಳಿಯದೀ ನೀಲಿಯಲಿ || ಈ ಬಾನು ||



ಒಂದೊಂದು ಹೂವಿಗೂ ಒಂದೊಂದು ಬಣ್ಣ

ಒಂದೊಂದು ಜೀವಕೂ ಒಂದೊಂದು ಕಣ್ಣ

ಯಾವುದೋ ಬಗೆಯಲ್ಲಿ ಎಲ್ಲರಿಗೂ ಅನ್ನ

ಕೊಟ್ಟ ಕರುಣೆಯ ಮೂಲ ಮರೆಸಿಹುದು ತನ್ನ || ಈ ಬಾನು ||



ನೂರಾರು ನದಿ ಕುಡಿದು ಮೀರದ ಕಡಲು

ಬೋರೆಂದು ಸುರಿ ಸುರಿದು ಆರದ ಮುಗಿಲು

ಸೇರಿಯೂ ಕೋಟಿ ತಾರೆ ತುಂಬದ ಬಯಲು

ಯಾರದೀ ಮಾಯೆ ಯಾವ ಬಿಂಬದ ನೆರಳು || ಈ ಬಾನು ||



ಹೊರಗಿರುವ ಪರಿಯೆಲ್ಲ ಅಡಗಿಹುದೇ ಒಳಗೆ

ಹುಡುಕಿದರೆ ಕೀಲಿ ಕೈ ಸಿಗದೆ ಎದೆಯೊಳಗೆ

ತಿಳಿಯದಲೆದರಲ್ಲಿ ಕುಳಿತಿರುವೆ ನೀನೇ

ಎನ್ನುವರು ನನಗೀಗ ಸೋಜಿಗವು ನಾನೇ || ಈ ಬಾನು ||

Wednesday, May 14, 2008

ಶ್ರಾವಣಾ ಬಂತು ಕಾಡಿಗೆ

(ಹಾಡುಪಾಡು - ಕವನ ಸಂಕಲನ)

ಶ್ರಾವಣಾ ಬಂತು ಕಾಡಿಗೆ| ಬಂತು ನಾಡಿಗೆ|
ಬಂತು ಬೀಡಿಗೆ| ಶ್ರಾವಣಾ ಬಂತು || ಪಲ್ಲವಿ ||

ಕಡಲಿಗೆ ಬಂತು ಶ್ರಾವಣಾ| ಕುಣಿಧ್ಹಾಂಗ ರಾವಣಾ|
ಕುಣಿದಾವ ಗಾಳಿ| ಭೈರವನ ರೂಪತಾಳಿ || ಅನುಪಲ್ಲವಿ ||

ಶ್ರಾವಣಾ ಬಂತು ಘಟ್ಟಕ್ಕ| ರಾಜ್ಯಪಟ್ಟಕ್ಕ|
ಬಾನು ಮಟ್ಟಕ್ಕ|
ಏರ್ಯಾವ ಮುಗಿಲು| ರವಿ ಕಾಣೆ ಹಾಡೆಹಗಲು|

ಶ್ರಾವಣಾ ಬಂತು ಹೊಳಿಗಳಿಗೆ| ಅದೆ ಶುಭಗಳಿಗೆ|
ಹೊಳಿಗೆ ಮತ್ತ ಮಳಿಗೆ|
ಆಗ್ಯೇದ ಲಗ್ನ| ಅದರಾಗ ಭೂಮಿ ಮಗ್ನ||

ಶ್ರಾವಣಾ ಬಂತು ಊರಿಗೆ| ಕೆರಿ ಕೇರಿಗೆ|
ಹೊಡೆದ ಝೂರಿಗೆ|
ಜೋಕಾಲಿ ಏರಿ| ಅಡರ್ಯಾವ ಮರಕ ಹಾರಿ|

ಶ್ರಾವಣಾ ಬಂತು ಮನಿಮನಿಗೆ| ಕೂಡಿ ದನಿದನಿಗೆ|
ಮನದ ನನಿಕೊನಿಕೊನಿಗೆ|
ಒಡೆದಾವ ಹಾಡೂ| ರಸ ಉಕ್ಕತಾವ ನೋಡು||
ಶ್ರಾವಣಾ ಬಂತು.

ಬೆಟ್ಟ ತೊಟ್ಟಾವ ಕುತನಿಯ ಅಂಗಿ|
ಹಸಿರು ನೋಡ ತಂಗಿ|
ಹೊರಟಾವೆಲ್ಲೊ ಜಂಗಿ|
ಜಾತ್ರಿಗೇನೋ| ನೆರೆದsದ ಇಲ್ಲೆ ತಾನೋ||

ಬನಬನ ನೋಡು ಈಗ ಹ್ಯಾಂಗ|
ಮದುವಿ ಮಗನ್ಹಾಂಗ
ತಲಿಗೆ ಬಾಸಿಂಗ|
ಕಟ್ಟಿಕೊಂಡೂ| ನಿಂತಾವ ಹರ್ಷಗೊಂಡು||

ಹಸಿರ್ಯ್ಟ್ಟ ಬಸುರಿಯ ಹಾಂಗ|
ನೆಲಾ ಹೊಲಾ ಹ್ಯಾಂಗ|
ಅರಿಸಿನಾ ಒಡೆಧಾಂಗ|
ಹೊಮ್ಮತಾವ| ಬಂಗಾರ ಚಿಮ್ಮತಾವ||

ಗುಡ್ಡ ದುಡ್ಡ ಸ್ಥಾವರಲಿಂಗ|
ಅವಕ ಅಭ್ಯಂಗ|
ಎರಿತಾವನ್ನೊ ಹಾಂಗ|
ಕೂಡ್ಯಾವ ಮೋಡ| ಸುತ್ತೆಲ್ಲ ನೋಡ ನೋಡ||

ನಾಡೆಲ್ಲ ಏರಿಯ ವಾರಿ||
ಹರಿತಾವ ಝರಿ|
ಹಾಲಿನ ತೊರಿ|
ಈಗ ಯಾಕ| ನೆಲಕೆಲ್ಲ ಕುಡಿಸಲಾಕ||
ಶ್ರಾವಣಾ ಬಂತು.

ಜಗದ್ಗುರು ಹುಟ್ಟಿದ ಮಾಸ|
ಕಟ್ಟಿ ನೂರು ವೇಷ|
ಕೊಟ್ಟ ಸಂತೋಷ|
ಕುಣಿತದ ತಾನsದ ದಣಿತದ|

ಶ್ರಾವಣಾ ಬಂತು ಕಾಡಿಗೆ| ಬಂತು ನಾಡಿಗೆ|
ಬಂತು ಬೀಡಿಗೆ| ಶ್ರಾವಣಾ ಬಂತು||

. ದ.ರಾ. ಬೇಂದ್ರೆ (ಅಂಬಿಕಾತನಯದತ್ತ) | ನಾದಲೀಲೆ

(ನಾದಲೀಲೆ - ಕವನ ಸಂಗ್ರಹ)

ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ || ಪಲ್ಲವಿ||

ಸಂಸಾರ ಸಾಗರದಾಗ ಲೆಕ್ಕವಿಲ್ಲದಷ್ಟು ದುಃಖದ ಬಂಡಿ
ನಾ ಬಲ್ಲೆ ನನಗೆ ಗೊತ್ತಿಲ್ಲದಿದ್ದರೂ ಎಲ್ಲಿ ಆಚೆಯಾ ದಂಡಿ
ಮಲಗಿರುವ ಕೂಸು ಮಲಗಿರಲಿ ಅಲ್ಲಿ, ಮುಂದಿನದು ದೇವರ ಚಿತ್ತ
ನಾ ತಡೀಲಾರೆ ಅದು, ಯಾಕ ನೋಡತೀ ಮತ್ತ ಮತ್ತ ಇತ್ತ?

ತಂಬಲs ಹಾಕದ ತುಂಬ ಕೆಂಪು ಗಿಡಗಡಕನಕಣ್ಣಿನ ಹಾಂಗ
ಇದ್ದಂಥ ತುಟಿಯ ಬಣ್ಣೆತ್ತ ಹಾರಿತು? ಯಾವ ಗಾಳಿಗೆ, ಹೀಂಗ
ಈ ಗದ್ದ, ಗಲ್ಲ, ಹಣಿ, ಕಣ್ಣುಕಂಡು ಮಾರೀಗೆ ಮಾರಿಯ ರೀತಿ
ಸಾವನs ತನ್ನ ಕೈ ಸವರಿತಲ್ಲಿ, ಬಂತೆನಗ ಇಲ್ಲದ ಭೀತಿ,

ಧಾರ್‍ಈಲೆ ನೆನೆದ ಕೈ ಹಿಡಿದೆ ನೀನು, ತಣ್ಣsಗ ಅಂತ ತಿಳಿದು
ಬಿಡವೊಲ್ಲಿ ಇನ್ನುನೂ, ಬೂದಿಮುಚ್ಚಿದ ಕೆಂಡ ಇದಂತ ಹೊಳೆದು
ಮುಗಿಲsನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲಿ ಎಲ್ಲಿನ್ನs
ಆ ಗಾದಿ ಮಾತು ನಂಬಿ, ನಾನು ದೇವರಂತ ತಿಳಿದಿಯೇನ ನೀ ನನ್ನ.

ಇಬ್ಬನ್ನಿ ತೊಳೆದರೂ ಹಾಲು ಮೆತ್ತಿದಾ ಕವಳಿಕಂಟಿಯಾ ಹಣ್ಣು
ಹೊಳೆ ಹೊಳೆವ ಹಾಂಗಿರುವ ಕಣ್ಣಿರುವ, ಹೆಣ್ಣ, ಹೇಳು ನಿನ್ನವೇನ ಈ ಕಣ್ಣು?
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲs
ಹುಣ್ಣವೀ ಚಂದಿರನ ಹೆಣ ಬಂತೊ ಮುಗಿಲಾಗ ತೇಲತ ಹಗಲ!

ನಿನ ಕಣ್ಣಿನ್ಯಾಗ ಕಾಲೂರಿ ಮಳೆಯು, ನಡ ನಡಕ ಹುಚ್ಚನಗಿ ಯಾಕ?
ಹನಿ ಒಡೆಯಲಿಕ್ಕೆ ಬಂದಂಥ ಮೋಡ ತಡಧಾಂಗ ಗಾಳಿಯ ನೆವಕ
ಅತ್ತಾರ ಅತ್ತುಬಿಡು, ಹೊನಲು ಬರಲಿ, ನಕ್ಯಾಕ ಮರಸತೀ ದುಕ್ಕ?
ಎವೆಬಡಿಸಿ ಕೆಡವು, ಬಿರಿಗಣ್ಣು ಬ್ಯಾಡ, ತುಟಿಕಚ್ಚಿ ಹಿಡಿಯದಿರು ಬಿಕ್ಕ

ಗಮಗಮಾ ಗಮಾಡಿಸತಾವ ಮಲ್ಲಿಗಿ

ಗಮಗಮಾ ಗಮಾಡಿಸತಾವ ಮಲ್ಲಿಗಿ
(ಗಂಗಾವತರಣ - ಕವನ ಸಂಗ್ರಹ)

ಗಮಗಮಾ ಗಮಾಡಿಸತಾವ ಮಲ್ಲಿಗಿ| ನೀವು ಹೊರಟಿದ್ದೀಗ ಎಲ್ಲಿಗೆ?
ಗಮಗಮಾ........... || ಪಲ್ಲವಿ||

ತುಳುಕ್ಯಾಡತಾವ ತೂಕಡಿಕಿ
ಎವಿ ಅಪ್ಪತಾವ ಕಣ್ಣ ದುಡುಕಿ
ಕನಸು ತೇಲಿ ಬರತಾವ ಹುಡುಕಿ||
ನೀವು ಹೊರಟಿದ್ದೀಗ ಎಲ್ಲೆಗೆ?

ಚಿಕ್ಕಿ ತೋರಸ್ತಾನ ಚಾಚಿ ಬೆರಳ
ಚಂದ್ರಾಮ ಕನ್ನಡಿ ಹರಳ
ಮನಸೋತು ಆಯಿತು ಮರುಳ||
ನೀವು ಹೊರಟಿದ್ದೀಗ ಎಲ್ಲೆಗೆ?

ಗಾಳಿತಬ್ಬತಾವ ಹೂಗಂಪು
ಚಂದ್ರನ ತೆಕ್ಕಿಗಿದೆ ತಂಪು
ನಿಮ ಕಂಡರ ಕವದಾವ ಜೊಂಪು||
ನೀವು ಹೊರಟಿದ್ದೀಗ ಎಲ್ಲಿಗೆ?

ನೆರಳಲ್ಲಾಡತಾವ ಮರದ ಬುಡಕs
ಕೆರಿ ತೆರಿ ನೂಗತಾವ ದಡsಕ
ಹೀಂಗೆ ಬಿಟ್ಟು ಇಲ್ಲಿ ನನ್ನ ನಡsಕ||
ನೀವು ಹೊರಟಿದ್ದೀಗ ಎಲ್ಲಿಗೆ?

ನಮ್ಮ ನಿಮ್ಮ ಒಂದತನದಾಗ
ಹಾಡು ಹುಟ್ಟಿ ಒಂದು ಮನದಾಗ
ಬೆಳದಿಂಗಳಾತು ಬನದಾಗ|| ನೀವು ಹೊರಟಿದ್ದೀಗ ಎಲ್ಲಿಗೆ?

ನಾವು ಬಂದೆವದಿಲ್ಲಿದಿಲ್ಲಿಗೆ
ಬಾಯಿ ಬಿಟ್ಟವಲ್ಲ ಮಲ್ಲಿಗೆ
ನೀರೊಡೆಡಿತಲ್ಲ ಕಲ್ಲಿಗೆ
ನೀವು ಹೊರಟಿದ್ದೀಗ ಎಲ್ಲಿಗೆ?||

ಬಂತ್ಯಾಕ ನಿಮಗೆ ಇಂದ ಮುನಿಸು
ಬೀಳಲಿಲ್ಲ ನಮಗೆ ಇದರ ಕನಸು
ರಾಯ ತಿಳಿಯಲಿಲ್ಲ ನಿಮ್ಮ ಮನಸು
ನೀವು ಹೊರಟಿದ್ದೀಗ ಎಲ್ಲಿಗೆ?||

ಮೈಸೂರ ಮಲ್ಲಿಗೆ- ಹಕ್ಕಿಯ ಹಾಡಿಗೆ ತಲೆದೂಗುವ ಹೂವು

ಹಕ್ಕಿಯ ಹಾಡಿಗೆ ತಲೆದೂಗುವ ಹೂವು ನಾನಾಗುವ ಆಸೆ
ಹಕ್ಕಿಯ ಹಾಡಿಗೆ ತಲೆದೂಗುವ ಹೂವು ನಾನಾಗುವ ಆಸೆ
ಹಸುವಿನ ಕೊರಳಿನ ಗೆಜ್ಜೆಯ ದನಿಯು ನಾನಾಗುವ ಆಸೆ

ಹಬ್ಬಿದ ಕಾಮನ ಬಿಲ್ಲಿನ ಮೇಲಿನ ಮುಗಿಲಾಗುವ ಆಸೆ
ಚಿನ್ನದ ಬಣ್ಣದ ಜಿಂಕೆಯ ಕಣ್ಣಿನ ಮಿಂಚಾಗುವ ಆಸೆ
ತೋಟದ ಕಂಪಿನ ಉಸಿರಲಿ ತೇಲುವ ಜೇನಾಗುವ ಆಸೆ
ಕಡಲಿನ ನೀಲಿಯ ನೀರಲಿ ಬಳುಕುವ ಮೀನಾಗುವ ಆಸೆ

ಸಿಡಿಲನು ಕಾರುವ ಬಿರುಮಳೆಗಂಜದೆ ಮುನ್ನೆಡೆಯುವ ಆಸೆ
ನಾಳೆಯ ಬದುಕಿನ ಇರುಳಿನ ತಿರುವಿಗೆ ದೀಪವನಿಡುವಾಸೆ
ಮಣ್ಣಿನ ಕೊಡುಗೆಗೆ ನೋವಿಗೆ ನಲಿವಿಗೆ ಕನ್ನಡಿ ಹಿಡಿವಾಸೆ
ಮಾನವ ಹೃದಯದ ಕರುಣೆಗೆ ಒಲವಿಗೆ ದನಿಗೂಡಿಸುವಾಸೆ

ಕೆ.ಎಸ್.ನರಸಿಂಹಸ್ವಾಮಿ ಸಿರಿಗೆರೆಯ ನೀರಲ್ಲಿ

ಸಿರಿಗೆರೆಯ ನೀರಲ್ಲಿ ಬಿರಿದ ತಾವರೆಯಲ್ಲಿ ಕೆಂಪಾಗಿ ನಿನ್ನ ಹೆಸರು
ಗುಡಿಯ ಗೋಪುರದಲ್ಲಿ ನೆರೆವ ದೀಪಗಳಲ್ಲಿ ಬೆಳಕಾಗಿ ನಿನ್ನ ಹೆಸರು
ನಿನ್ನ ಹೆಸರು…

ಜೋಯಿಸರಾ ಹೊಲದೊಳಗೆ ಕುಣಿವ ಕೆಂಗರುವಿನ ಕಣ್ಣಲ್ಲಿ ನಿನ್ನ ಹೆಸರು
ತಾಯ ಮೊಲೆಯಲ್ಲಿ ಕರು ತುಟಿಯಿಟ್ಟು ಚೆಲ್ಲಿಸಿದ ಹಾಲಲ್ಲಿ ನಿನ್ನ ಹೆಸರು
ನಿನ್ನ ಹೆಸರು…

ಹೂಬನದ ಬಿಸಿಲಲ್ಲಿ ನರ್ತಿಸುವ ನವಿಲಿನ ದನಿಯಲ್ಲಿ ನಿನ್ನ ಹೆಸರು
ಒಂದಾಳೆ ಹೂವಲ್ಲಿ ಹೊರಟ ಪರಿಮಳದಲ್ಲಿ ಉಯ್ಯಾಲೆ ನಿನ್ನ ಹೆಸರು
ಉಯ್ಯಾಲೆ ನಿನ್ನಾ ಹೆಸರು…

ಮರೆತ ತುಟಿಗೆ ಬಾರದೆ ಮೋಡಮರೆಯೊಳಗೆ ಬೆಳದಿಂಗಳೊ ನಿನ್ನ ಹೆಸರು
ನೆನೆದಾಗ ಕಣ್ಣ ಮುಂದೆಲ್ಲಾ ಹುಣ್ಣಿಮೆಯೊಳಗೆ ಹೂಬಾಣ ನಿನ್ನ ಹೆಸರು
ನಿನ್ನ ಹೆಸರು… ನಿನ್ನ ಹೆಸರು
ನಿನ್ನ ಹೆಸರು… ನಿನ್ನ ಹೆಸರು

ಅಂತರಂಗದ ಮೃದಂಗ

ಅಂತರಂಗದ ಮೃದಂಗ ಅಂತು ತೋಂ ತನಾನ

ಚಿತ್ತ ತಾಳ ಬಾರಿಸುತಲಿದ್ದು ಝಂ ಝಣಣ ನಾ

ನೆನಪು ತಂತಿ ಮೀಟುತಿತ್ತು ತೋಂತನನ ತಾನ ತೋಂತನನ ತಾನ ತೋಂತನನ ತಾನ ನ



ಹಲವು ಜನ್ಮದಿಂದ ಬಂದ ಯಾವುದೋನೋ ಧ್ಯಾನ

ಏಕನಾದದಂಥದೊಂದು ತಾನದ ವಿತಾನ

ತನಗೆ ತಾನೇ ಸೋಲುತಿಹುದು ನೂಲುತಿಹುದು ಗಾನ || ೩ || || ಅಂ ||



ಕಲ್ಪದಾದಿಯಲ್ಲಿ ನನ್ನ ನಿನ್ನ ವಿರಹವಾಗಿ

ಎಲ್ಲೋ ಏನೋ ನಿನ್ನ ಹುಡುಕಿ ಕಾಂಬ ಕಣ್ಣೆ ಹೋಗಿ

ಮರೆವೆಗೊಂದು ಬಿದ್ದೆ ನಾನು ನೆಲದ ಮಣ್ಣು ತಾಗಿ || ೩ || || ಅಂ ||



ಕತ್ತಲಲ್ಲಿ ಬೆಳಕು ಮಿಂಚಿ ಪಡೆತಿತೇಳು ಬಣ್ಣ

ಮೂಕ ಮೌನ ತೂಕ ಮೀರಿ ದನಿಯು ಹಬ್ಬಿತಣ್ಣ

ಕಣ್ಣ ಮಣ್ಣ ಕೂಡಲಲ್ಲಿ ಹಾಡು ಕಟ್ಟಿತಣ್ಣ || ೩ || || ಅಂ ||


Posted by Sathyanarayana.R.G at 7:48 AM 0 comments

ದೀಪವು ನಿನ್ನದೆ ಗಾಳಿಯು ನಿನ್ನದೆ ಆರದಿರಲಿ ಬೆಳಕು

ದೀಪವು ನಿನ್ನದೆ ಗಾಳಿಯು ನಿನ್ನದೆ ಆರದಿರಲಿ ಬೆಳಕು

ಕಡಲು ನಿನ್ನದೆ ಹಡಗು ನಿನ್ನದೆ ಮುಳುಗದಿರಲಿ ಬದುಕು || ದೀ ||



ಬೆಟ್ಟವು ನಿನ್ನದೆ ಬಯಲು ನಿನ್ನದೆ ಹಬ್ಬಿನದಲಿ ಪ್ರೀತಿ

ನೆಳಲೊ ಬಿಸಿಲೊ ಎಲ್ಲವು ನಿನ್ನದೆ ಇರಲಿ ಏಕ ರೀತಿ || ದೀ ||



ಆಗೊಂದು ಸಿಡಿಲು ಈಗೊಂದು ಮುಗಿಲು ನಿನಗೆ ಅಲಂಕಾರ

ಅಲ್ಲೊಂದು ಹಕ್ಕಿ ಇಲ್ಲೊಂದು ಮುಗುಳು ನಿನಗೆ ನಮಸ್ಕಾರ || ದೀ ||



ಅಲ್ಲಿ ರಣದುಂದುಭಿ ಇಲ್ಲೊಂದು ವೀಣೆ ನಿನ್ನ ಪ್ರತಿಧ್ವನಿ

ಆ ಮಹಾಕಾವ್ಯ ಈ ಭಾವಗೀತೆ ನಿನ್ನ ಪದ ಧ್ವನಿಯೆ || ದೀ ||

ಎದೆ ತುಂಬಿ ಹಾಡಿದೆನು

ಎದೆ ತುಂಬಿ ಹಾಡಿದೆನು ಅಂದು ನಾನು

ಮನವಿಟ್ಟು ಕೇಳಿದಿರಿ ಅಲ್ಲಿ ನೀವು || ಎದೆ ||



ಇಂದು ನಾ ಹಾಡಿದರೂ ಅಂದಿನಂತೆಯೆ ಕುಳಿತು

ಕೇಳುವಿರಿ ಸಾಕೆನಗೆ ಅದುವೆ ಬಹುಮಾನ

ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ || ಎದೆ ||



ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ

ಹಾಡುವುದು ಅನಿವಾರ್ಯ ಕರ್ಮ ನನಗೆ

ಕೇಳುವವರಿಹರೆಂದು ನಾ ಬಲ್ಲೆನದರಿಂದ

ಹಾಡುವೆನು ಮೈದುಂಬಿ ಎಂದಿನಂತೆ

ಯಾರು ಕಿವಿ ಮುಚ್ಚಿದರೂ ನನಗಿಲ್ಲ ಚಿಂತೆ



ಎದೆ ತುಂಬಿ ಹಾಡಿದೆನು ಇಂದು ನಾನು

ಮನವಿಟ್ಟು ಕೇಳಿದಿರಿ ಇಲ್ಲಿ ನೀವು..

ಯಾವ ಮೋಹನ ಮುರಳಿ

ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನ್ನು

ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು || ಯಾವ ||



ಹೂವು ಹಾಸಿಗೆ ಚಂದ್ರ ಚಂದನ ಬಾಹುಬಂಧನ ಚುಂಬನ

ಬಯಕೆ ತೋಟದ ಬೇಲಿಯೊಳಗೆ ಕರಣ ಕಣದಿ ರಿಂಗಣ || ಯಾವ ||



ಸಪ್ತ ಸಾಗರದಾಚೆಯೆಲ್ಲೋ ಸುಪ್ತ ಸಾಗರ ಕಾದಿದೆ

ಒಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗೂ ಹಾಯಿತೇ || ಯಾವ ||



ವಿವಶವಾಯಿತು ಪ್ರಾಣ ಪರವಶವು ನಿನ್ನೀ ಚೇತನ

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತೊಡೆವುದೇ ಜೀವನ

ಯಾವ ಮೋಹನ ಮುರಳಿ ಕರೆಯಿತು ಇದ್ದಕ್ಕಿದ್ದೆಡೆ ನಿನ್ನನ್ನು

ಯಾವ ಬೃಂದಾವನವು ಚಾಚಿತು ತನ್ನ ಮಿಂಚಿನ ಕೈಯನು || ಯಾವ ||

ಎಲ್ಲಿ ಜಾರಿತೋ ಮನವು ಎಲ್ಲೆ ಮೀರಿತೋ

ಎಲ್ಲಿ ಜಾರಿತೋ ಮನವು ಎಲ್ಲೆ ಮೀರಿತೋ

ಎಲ್ಲಿ ಅಲೆಯುತಿಹುದೋ ಏಕೆ ನಿಲ್ಲದಾಯಿತೋ || ಎಲ್ಲಿ ||



ದೂರದೊಂದು ತೀರದಿಂದ ತೇಲಿ ಪಾರಿಜಾತ ಗಂಧ

ದಾಟಿ ಬಂತು ಬೇಲಿಸಾಲ ಮೀಟಿ ಹಳೆಯ ಮಧುರ ನೋವ || ಎಲ್ಲಿ ||



ಬಾನಿನಲ್ಲಿ ಒಂಟಿ ತಾರೆ ಸೋನೆ ಸುರಿವ ಇರುಳ ಮೋರೆ

ಕತ್ತಲಲ್ಲಿ ಕುಳಿತು ಒಳಗೆ ಬಿಕ್ಕುತಿಹಳು ಯಾರೋ ನೀರೆ || ಎಲ್ಲಿ ||



ಹಿಂದೆ ಯಾವ ಜನ್ಮದಲ್ಲೋ ಮಿಂದ ಪ್ರೇಮ ಜಲದ ಕಂಪೋ

ಬಂದು ಚೀರುವೆದೆಯ ಭಾವ ಹೇಳಲಾರೆ ತಾಳಲಾರೆ || ಎಲ್ಲಿ ||

ಕಾಣದ ಕಡಲಿಗೆ ಹಂಬಲಿಸಿದೆ ಮನ

ಕಾಣದ ಕಡಲಿಗೆ ಹಂಬಲಿಸಿದೆ ಮನ

ಕಾಣಬಲ್ಲೆನೆ ಒಂದು ದಿನ ಕಡಲೊಳು

ಕೂಡಬಲ್ಲೆನೆ ಒಂದು ದಿನ || ಕಾ ||



ಕಾಣದ ಕಡಲಿನ ಮೊರೆತದ ಜೋಗುಳ ಒಳಗಿವಿಗಿಂದು ಕೇಳುತಿದೆ

ನನ್ನ ಕಲ್ಪನೆಯು ತನ್ನ ಕಡಲನೆ ಛಿದ್ರಿಸಿ ಚಿಂತಿಸಿ ಸುರಿಯುತಿದೆ

ಎಲ್ಲಿರುವುದೋ ಅದು ಎಂತಿರುವುದೋ ಅದು

ನೋಡಬಲ್ಲೆನೆ ಒಂದು ದಿನ ಕಡಲನು ಕೂಡಬಲ್ಲೆನೆ ಒಂದು ದಿನ || ಕಾಣದ ||



ಸಾವಿರ ಹೊಳೆಗಳು ತುಂಬಿ ಹರಿದರೂ ಒಂದೇ ಸಮನಾಗಿಹುದಂತೆ

ಸುನಿಲ ವಿಸ್ತರ ತರಂಗ ಶೋಭಿತ ಗಂಭೀರಾಂಬುಧಿ ತಾನಂತೆ

ಮುನ್ನೀರಂತೆ ಅಪಾರವಂತೆ

ಕಾಣಬಲ್ಲೆನೆ ಒಂದು ದಿನ ಅದರೊಳು ಕರಗಲಾರೆನೆ ಒಂದು ದಿನ || ಕಾಣದ ||



ಜಟಿಲ ಕಾನನದ ಕುಟಿಲ ಪಥಗಳಲಿ ಹರಿವ ತೊರೆಯು ನಾನು

ಎಂದಿಗಾದರೂ ಕಾಣದ ಕಡಲಿಗೆ ಸೇರಬಲ್ಲೆ ನೀನು

ಸೇರಬಹುದೇ ನಾನು ಕಡಲ ನೀಲಿಯೊಳು ಕರಗಬಹುದೇ ನಾನು || ಕಾಣದ ||

ಓ ನನ್ನ ಚೇತನ

ಓ ನನ್ನ ಚೇತನ ಆಗು ನೀ ಅನಿಕೇತನ



ರೂಪರೂಪಗಳನು ದಾಟಿ

ನಾಮ ಕೋಟಿಗಳನು ಮೀಟಿ

ಎದೆಯ ಬಿರಿಯೆ ಭಾವ ದೀಟಿ || ಓ ನನ್ನ ||



ನೂರು ಮತದ ಹೊಟ್ಟತೂರಿ

ಎಲ್ಲ ತತ್ವದೆಲ್ಲೆ ಮೀರಿ

ನಿರ್ದಿಗಂತವಾಗಿ ಏರಿ || ಓ ನನ್ನ ||



ಎಲ್ಲಿಯೂ ನಿಲ್ಲದಿರು

ಮನೆಯನೆಂದು ಕಟ್ಟದಿರು

ಕೊನೆಯನೆಂದು ಮುಟ್ಟದಿರು || ಓ ನನ್ನ ||



ಅನಂತ ತಾನನಂತವಾಗಿ

ಆಗುತಿಹನೆ ನಿತ್ಯಯೋಗಿ

ಅನಂತ ನೀ ಅನಂತವಾಗು

ಆಗು ಆಗು ಆಗು ಆಗು || ಓ ನನ್ನ ||

ಜೋಗದ ಸಿರಿ

ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ

ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ

ನಿತ್ಯಹರಿದ್ವರ್ಣ ವನದ ತೇಗ ಗಂಧ ತರುಗಳಲ್ಲಿ

ನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆ

ನಿತ್ಯೋತ್ಸವ ತಾಯೆ ನಿತ್ಯೋತ್ಸವ || ಜೋಗದ ||



ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿ

ಗತಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ

ಓಲೆಗರಿಯ ಸಿರಿಗಳಲ್ಲಿ ದೇಗುಲಗಳ ಬಿತ್ತಿಗಳಲಿ

ನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆ

ನಿತ್ಯೋತ್ಸವ ತಾಯೆ ನಿತ್ಯೋತ್ಸವ || ಜೋಗದ ||



ಹಲವೆನ್ನದ ಹಿರಿಮೆಯೆ ಕುಲವೆನ್ನದ ಗರಿಮೆಯೆ

ಸದ್ವಿಕಾಸ ಶೀಲ ನುಡಿಯ ಲೋಕಾವೃತ ಸೀಮೆಯೆ

ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ

ನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆ

ನಿತ್ಯೋತ್ಸವ ತಾಯೆ ನಿತ್ಯೋತ್ಸವ || ಜೋಗದ ||

bhavageethe

ಅತ್ತಿತ್ತ ನೋಡದಿರು ಅತ್ತು ಹೊರಳಾಡದಿರು

ನಿದ್ದೆ ಬರುವಳು ಹೊದ್ದು ಮಲಗು ಮಗುವೇ

ಜೋ ಜೋಜೋಜೋ...

ಸುತ್ತಿ ಹೊರಳಾಡದಿರು ಮತ್ತೆ ಹಟ ಹೂಡದಿರು

ನಿದ್ದೆ ಬರುವಳು ಕದ್ದು ಮಲಗು ಮಗುವೇ

ಜೋ ಜೋಜೋಜೋ..



ಮಲಗು ಚೆಲ್ವಿನ ತೆರೆಯೆ ಮಲಗು ಒಲ್ಮೆಯ ಸಿರಿಯೆ

ಮಲಗು ತೊಟ್ಟಿಲ ಸಿರಿಯೆ ದೇವರಂತೆ

ಮಲಗು ಮುದ್ದಿನ ಗಿಣಿಯೆ ಮಲಗು ಮುತ್ತಿನ ಮಣಿಯೆ

ಮಲಗು ಚಂದಿರನೂರ ಕೂಗುವೆಯಂತೆ || ಅತ್ತಿತ್ತ ||



ತಾರೆಗಳ ಜರತಾರಿ ಅಂಗಿ ತೊಡಿಸುವರಂತೆ

ಚಂದಿರನ ತಂಗಿಯರು ನಿನ್ನ ಕರೆದು

ಹೂವ ಮುಡಿಸುವರಂತೆ ಹಾಲ ಕುಡಿಸುವರಂತೆ

ವೀಣೆ ನುಡಿಸುವರಂತೆ ಸುತ್ತ ನೆರೆದು || ಅತ್ತಿತ್ತ ||



ಬಣ್ಣ ಬಣ್ಣದ ಕನಸು ಕರಗುವುದು ಬಲು ಬೇಗ

ಹಗಲು ಬರುವನು ಬೆಳ್ಳಿ ಮುಗಿಲ ನಡುವೆ

ಚಿನ್ನದಂಬಾರಿಯಲಿ ನಿನ್ನ ಅಳುಕು ವರಾಮ

ಪಟ್ಟದಾನೆಯ ಮೇಲೆ ಪುಟ್ಟ ಮಗುವೆ || ಅತ್ತಿತ್ತ ||

THE LONG WALK

In 1941, the author and a small group of fellow prisoners escaped a Soviet labor camp. Their march out of Siberia, through China, the Gobi Desert, Tibet, and over the Himalayas to British India is a remarkable statement about man's desire to be free.With a new Afterword by the author, and the author's Foreword to the Polish edition, this new edition of The Long Walk is destined to outrank its classic status. (6 X 9, 256 pages, map)"One of the epic treks of the human race. Shackleton, Franklin, Amundsen...history is filled with people who have crossed immense distances and survived despite horrific odds. None of them, however, has achieved the extraordinary feat Rawicz has recorded. He and his companions crossed an entire continent--the Siberian arctic, the Gobi desert and then the Himalayas--with nothing but an ax, a knife, and a week's worth of food...His account is so filled with despair and suffering it is almost unreadable. But it must be read--and re-read."--Sebastian Junger, author of The Perfect Storm"The Long Walk is a book that I absolutely could not put down and one that I will never forget..."--Stephen Ambrose