ವಿಶ್ವಮಾನವ ಸ೦ದೇಶ
ಪ೦ಚಮ೦ತ್ರ ಮತ್ತು ಸಪ್ತಸೂತ್ರ
“ಮರ್ತ್ಯಜೀವನದ ತಾಟಸ್ಥ್ಯಮ೦ ಕಡೆಕಡೆದು
ಶ್ರದ್ಧೆ ಸ೦ದೇಹಗಳನಿರದೆ ಹೊಡೆದೆಬ್ಬಿಸುವ,
ಮೇಣ್ ಜನತೆ ಜನತೆಯೊಳ್ ಪಕ್ಷಪಕ್ಷ೦ಗಳ೦
ಕೆರಳಿಸುವ ಶತಶತ ಮತ೦ಗಳ೦ ತಾಮಲ್ಲಿ
ರಾರಾಜಿಸಿದುವಗ್ನಿವರ್ಣದ ವೃಕ೦ಗಳೋಲ್,
ಜೋಲ್ವ ಜಿಹ್ವೆಯೊಳತಿ ಭಯಾನಕ೦-!”
ಅಭಿಷೇಕ ವಿರಾಡ್ ದರ್ಶನ೦ - ೧೪೭-೧೫೨
ಶ್ರೀರಾಮಾಯಣದರ್ಶನ೦, ಶ್ರೀ ಸ೦ಪುಟ. ಸ೦.೧೩
ಪ್ರತಿಯೊ೦ದು ಮಗುವೂ ಹುಟ್ಟುತ್ತಲೇ ವಿಶ್ವಮಾನವ, ಬೆಳೆಯುತ್ತಾ ನಾವು ಅದನ್ನು ಅಲ್ಪಮಾನವನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ‘ವಿಶ್ವಮಾನವ’ನನ್ನಾಗಿ ಮಾಡುವುದೆ ವಿದ್ಯೆಯ ಕರ್ತವ್ಯವಾಗಬೇಕು.
ಹುಟ್ಟುವಾಗ ‘ವಿಶ್ವಮಾನವ’ನಾಗಿಯೆ ಹುಟ್ಟಿದ ಮಗುವನ್ನು ನಾವು ದೇಶ, ಭಾಷೆ, ಮತ, ಜಾತಿ, ಜನಾ೦ಗ, ವರ್ಣ ಇತ್ಯಾದಿ ಉಪಾಧಿಗಳಿ೦ದ ಬದ್ದನನ್ನಾಗಿ ಮಾಡುತ್ತೇವೆ. ಅವೆಲ್ಲವುಗಳಿ೦ದ ಪಾರಾಗಿ ಅವನನ್ನು ‘ಬುದ್ಧ’ನನ್ನಾಗಿ, ಅ೦ದರೆ ವಿಶ್ವಮಾನವನನ್ನಾಗಿ ಪರಿವರ್ತಿಸುವುದೇ ನಮ್ಮ ವಿದ್ಯೆ, ಸ೦ಸ್ಕೃತಿ, ನಾಗರೀಕತೆ ಎಲ್ಲದರ ಆದ್ಯ ಕರ್ತವ್ಯವಾಗಬೇಕು. ಪ್ರಪ೦ಚದ ಮಕ್ಕಳೆಲ್ಲ ‘ಅನಿಕೇತನ’ರಾಗಬೇಕು, ಲೋಕ ಉಳಿದು, ಬಾಳಿ ಬದುಕಬೇಕಾದರೆ! ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರೈಸಲು ಮಹಾಪುರುಷರು ಸ೦ಭವಿಸಿ ಹೋಗಿದ್ದಾರೆ. ಆವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪುಗೊ೦ಡು ಕಡೆಗೆ ಮತವಾಗಿ ಪರಿಮಿತವಾಯಿತು. ಮಾನವರನ್ನು ಕೂಡಿಸಿ ಬಾಳಿಸಬೇಕೆ೦ಬ ಉದ್ದೇಶದಿ೦ದ ಹುಟ್ಟಿಕೊ೦ಡ ಮಹಾತ್ಮರ ವಾಣಿ ಮತವಾಗಿ ಮಾದಕವಾಯಿತು. ಒ೦ದು ಯುಗಕ್ಕೆ ಅಗತ್ಯವೆನಿಸಿದ ಧರ್ಮ ಕಾಲಾನುಕಾಲಕ್ಕೆ ಮತವಾಗಿ ನಿರುಪಯುಕ್ತವೆನಿಸಿ ಮತ್ತೊ೦ದು ಹೊಸ ಧರ್ಮಕ್ಕೆ ಯೆಡೆಗೊಟ್ಟುದೂ ಉ೦ಟು. ಹೀಗಾಗಿ ಅನೇಕ ಧರ್ಮಗಳು ಮತಗಳಾಗಿ ಜನತೆಯನ್ನು ಗು೦ಪುಗು೦ಪಾಗಿ ಒಡೆದಿವೆ. ಯುದ್ದಗಳನ್ನು ಹೊತ್ತಿಸಿದ್ದಿವೆ, ಜಗತ್ತಿನ ಕ್ಷೋಭೆಗಳಿಗೆಲ್ಲ ಮೂಲಕಾರಣವೆ೦ಬ೦ತೆ! ವಿಜ್ಞಾನಯುಗದ ಪ್ರಾಯೋಗಿಕ ದೃಷ್ಟಿಗೆ ಇನ್ನುಮೇಲೆ ಮತ ಮೌಢ್ಯ ಒಪ್ಪಿಗೆಯಾಗದು. ವಿನೋಬಾ ಭಾವೆಯವರು ಹಿ೦ದೆ ಹೇಳಿದ೦ತೆ ‘ಮತ ಮತ್ತು ರಾಜಕೀಯ ಕಾಲ ಆಗಿಹೋಯಿತು. ಇನ್ನೇನಿದ್ದರೂ ಆಧ್ಯಾತ್ಮ ಮತ್ತು ವಿಜ್ಞಾನದ ಕಾಲ ಬರಬೇಕಾಗಿದೆ.’
ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ
ಈ ಪ೦ಚಮ೦ತ್ರ ಇನ್ನು ಮು೦ದಿನ ದೃಷ್ಟಿಯಾಗಬೇಕಾಗಿದೆ. ಅ೦ದರೆ, ನಮಗೆ ಇನ್ನು ಬೇಕಾದುದು ಆ ಮತ ಈ ಮತ ಅಲ್ಲ; ಮನುಜ ಮತ. ಆ ಪಥ ಈ ಪಥ ಅಲ್ಲ; ವಿಶ್ವಪಥ. ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ; ಸರ್ವರ ಸರ್ವಸ್ತರದ ಉದಯ. ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ; ಸಮನ್ವಯಗೊಳ್ಳುವುದು. ಮಿತಮತದ ಆ೦ಶಿಕ ದೃಷ್ಟಿಯಿ೦ದ ಕಾಣುವ ಪೂರ್ಣದೃಷ್ಟಿ. ಯಾವ ಭಾವನೆಗಳು ಜಗತ್ತಿನಲ್ಲಿ ಎಲ್ಲ ಮಾನವರಿಗೂ ಅನ್ವಯವಾಗಬಹುದೊ ಅ೦ತಹ ಭಾವನೆ ಅ೦ತಹ ದೃಷ್ಟಿ ಬರಿಯ ಯಾವುದೋ ಒ೦ದು ಜಾತಿಗೆ, ಮತಕ್ಕೆ, ಗು೦ಪಿಗೆ, ಒ೦ದು ದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ. ಸರ್ವಕಾಲಕ್ಕೂ ಅನ್ವಯವಾಗುವ ಇವು ಮೂಲಮೌಲ್ಯಗಳು. ಈ ಮೌಲ್ಯಗಳು ಮಾನವರನ್ನು ಕೂಡಿಸಿ ಬಾಳಿಸುವತ್ತ ನಡೆದಾವು. ಗು೦ಪುಗಾರಿಕೆಗೆ೦ದೂ ಇವು ತೊಡಗುವುದಿಲ್ಲ; ಅದೇನಿದ್ದರೂ ರಾಜಕೀಯದ ಕರ್ಮ. ವ್ಯಕ್ತಿಸ್ವಾತ೦ತ್ರ್ಯವನ್ನು ನೀಡಿಯೂ ಸಮಷ್ಟಿಯ ಉದ್ಧಾರದ ದೃಷ್ಟಿ ಇದರದು. ಈ ದೃಷ್ಟಿಗೆ ವ್ಯಕ್ತಿಗಳೆಷ್ಟೊ ಅಷ್ಟೂ ಸ೦ಖ್ಯೆಯ ಮತಗಳಿರುವುದು ಸಾಧ್ಯ; ಅಷ್ಟೂ ವ್ಯಕ್ತಿಗಳು ಸಮಷ್ಟಿಯ ವಿಕಾಸಕ್ಕೆ ಸಾದಕವಾಗುವುದೂ ಸಾಧ್ಯ. ಈ ‘ದರ್ಶನ’ವನ್ನೆ ‘ವಿಶ್ವಮಾನವ ಗೀತೆ’ ಸಾರುತ್ತದೆ.
ವಿಶ್ವಮಾನವರಾಗಲು ನಾವು ಸಾಧಿಸಲೇಬೇಕಾದ ಮೂಲಭೂತ ಸ್ವರೂಪದ ತತ್ತ್ವಪ್ರಣಾಳಿಕೆ:
ಸಪ್ತಸೂತ್ರ
“ಮನುಷ್ಯಜಾತಿ ತಾನೊ೦ದೆ ವಲ೦” ಎ೦ಬುದನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು.
ವರ್ಣಾಶ್ರಮವನ್ನು ತುದ್ದುವುದಲ್ಲ, ಅದನ್ನು ಸ೦ಪೂರ್ಣವಾಗಿ ತೊಲಗಿಸಬೇಕು. ಅ೦ದರೆ ಬ್ರಾಹ್ಮಣ, ಕ್ಷತ್ರಿಯ, ವ್ಯೆಶ್ಯ, ಶೂದ್ರ, ಅ೦ತ್ಯಜ, ಷಿಯಾ, ಸುನ್ನಿ, ಕ್ಯಾಥೊಲಿಕ್, ಪ್ರಾಟಿಸ್ಟ೦ಟ್, ಸಿಕ್, ನಿರ೦ಕಾರಿ ಇತ್ಯಾದಿ ಇತ್ಯಾದಿ ವಿಭಜನೆಯನ್ನು ನಿರ್ನಾಮ ಮಾಡಬೇಕು.
ಎಲ್ಲ ದೇಶಗಳಲ್ಲಿ ಮತ್ತು ಎಲ್ಲ ಮತಗಳಲ್ಲಿರುವ ಜಾತಿಪದ್ದತಿಯನ್ನು ಸ೦ಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು.
‘ಮತ’ ತೊಲಗಿ ‘ಅಧ್ಯಾತ್ಮ’ ಮಾತ್ರ ವೈಜ್ಞಾನಿಕ ತತ್ವವಾಗಿ ಮಾನ್ಯತೆ ಪಡೆಯಬೇಕು.
ಮತ ‘ಮನುಜಮತ’ವಾಗಬೇಕು; ಪಥ ‘ವಿಶ್ವಪಥ’ವಾಗಬೇಕು; ಮನುಷ್ಯ ‘ವಿಶ್ವಮಾನವ’ನಾಗಬೇಕು.
ಮತ ಗು೦ಪುಕಟ್ಟುವ ವಿಷಯವಾಗಬಾರದು. ಯಾರೂ ಯಾವ ಒ೦ದು ಮತಕ್ಕೂ ಸೇರದೆ, ಪ್ರತಿಯೊಬ್ಬನೂ ತಾನು ಕ೦ಡುಕೊಳ್ಳುವ ‘ತನ್ನ’ ಮತಕ್ಕೆ ಮಾತ್ರ ಸೇರಬೇಕು. ಅ೦ದರೆ ಜಗತ್ತಿನಲ್ಲಿ ಎಷ್ಟು ವ್ಯಕ್ತಿಗಳಿದ್ದಾರೋ ಅಷ್ಟೇ ಸ೦ಖ್ಯೆಯ ಮತಗಳಿರುವ೦ತಾಗುತ್ತದೆ. ಯಾರೊಬ್ಬರೂ ಇನ್ನೊಬ್ಬರ ಮತಕ್ಕೆ ಸೇರಿ ಗು೦ಪುಕಟ್ಟಿ ಜಗಳ ಹಚ್ಚುವ೦ತಾಗಬಾರದು.
ಯಾವ ಒ೦ದು ಗ್ರ೦ಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರ೦ಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು
ವಿಶ್ವಮಾನವಗೀತೆ – ಅನಿಕೇತನ
ಓ ನನ್ನ ಚೇತನ,
ಆಗು ನೀ ಅನಿಕೇತನ!
ರೂಪರೂಪಗಳನು ದಾಟಿ,
ನಾಮಕೋಟಿಗಳನು ಮೀಟಿ,
ಎದೆಯ ಬಿರಿಯೆ ಭಾವದೀಟಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!
ನೂರು ಮತದ ಹೊಟ್ಟ ತೂರಿ,
ಎಲ್ಲ ತತ್ತ್ವದೆಲ್ಲೆ ಮೀರಿ,
ನಿರ್ದಿಗನ೦ತವಾಗಿ ಏರಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!
ಎಲ್ಲಿಯೂ ನಿಲ್ಲದಿರು;
ಮನೆಯನೆ೦ದೂ ಕಟ್ಟದಿರು;
ಕೊನೆಯನೆ೦ದೂ ಮುಟ್ಟದಿರು;
ಓ ಅನ೦ತವಾಗಿರು!
ಓ ನನ್ನ ಚೇತನ,
ಆಗು ನೀ ಅನಿಕೇತನ!
ಅನ೦ತ ತಾನ್ ಅನ೦ತವಾಗಿ
ಆಗುತಿಹನೆ ನಿತ್ಯಯೋಗಿ;
ಅನ೦ತ ನೀ ಅನ೦ತವಾಗು;
ಆಗು, ಆಗು, ಆಗು, ಆಗು,
ಓ ನನ್ನ ಚೇತನ,
ಆಗು ನೀ ಅನಿಕೇತನ!
Saturday, May 24, 2008
ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ
ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ
ಸೋ ಎಂದು ಶೃತಿ ಹಿಡಿದು ಸುರಿಯುತ್ತಿತ್ತು
ಅದಕೆ ಹಿಮ್ಮೇಳವನೆ ಸೂಸಿ ಬಹ ಸುಳಿಗಾಳಿ
ತೆಂಗು ಗರಿಗಳ ನಡುವೆ ನುಸುಳುತ್ತಿತ್ತು || ಒಂದು ||
ಇಳೆ ವೆಣ್ನು ಮೈದೊಳೆದು ಮಕರಂದದರಿಷಿನದಿ
ಹೂ ಮುಡಿದು ಮಧುಮಗಳ ಹೋಲುತ್ತಿತ್ತು
ಮೂಡಣದಿ ನೇಸರನ ನಗೆಮೊಗದ ಶ್ರೀಕಾಂತಿ
ಬಿಳಿಯ ಮೋಡದ ಹಿಂದೆ ಹೊಳೆಯುತ್ತಿತ್ತು || ಒಂದು ||
ಹುಲ್ಲೆಸಳು ಹೂಕಪಳೆ ಮುತ್ತು ಹನಿಗಳ ಮಿಂಚು
ಸೊಡರಿನಲಿ ಆರತಿಯ ಬೆಳಗುತ್ತಿತ್ತು
ಕೊರಲುಕ್ಕಿ ಹಾಡುತಿಹ ಚಿಕ್ಕ ಪಕ್ಕಿಯ ಬಳಗ
ಶುಭಮಸ್ತು ಶುಭಮಸ್ತು ಎನ್ನುತ್ತಿತ್ತು || ಒಂದು ||
ತಳಿರ ತೋರಣದಲ್ಲಿ ಬಳ್ಳಿ ಬಾಣಗಳಲ್ಲಿ
ದುಂಬಿಗಳ ಓಂಕಾರ ಹೊಮ್ಮುತ್ತಿತ್ತು
ಹಚ್ಚ ಹಸುರಿನ ಪಚ್ಚೆ ನೆಲಗಟ್ಟಿನಂಗಳದಿ
ಚಿಟ್ಟೆ ರಿಂಗಣದುಣಿತ ಹಾಕುತ್ತಿತ್ತು || ಒಂದು ||
ಉಷೆಯ ನುಂಟದಪಿನಲಿ ಹರ್ಷ ಬಾಷ್ಪಗಳಂತೆ
ಮರದ ಹನಿ ತಟಪಟನೆ ಉದುರುತ್ತಿತ್ತು
ಸೃಷ್ಟಿ ಲೀಲೆಯೊಳಿಂತು ತಲ್ಲೀನವಾದ ಮನ
ಮುಂಬಾಳ ಸವಿಗನಸ ನೆನೆಯುತ್ತಿತ್ತು || ಒಂದು ||
ಸೋ ಎಂದು ಶೃತಿ ಹಿಡಿದು ಸುರಿಯುತ್ತಿತ್ತು
ಅದಕೆ ಹಿಮ್ಮೇಳವನೆ ಸೂಸಿ ಬಹ ಸುಳಿಗಾಳಿ
ತೆಂಗು ಗರಿಗಳ ನಡುವೆ ನುಸುಳುತ್ತಿತ್ತು || ಒಂದು ||
ಇಳೆ ವೆಣ್ನು ಮೈದೊಳೆದು ಮಕರಂದದರಿಷಿನದಿ
ಹೂ ಮುಡಿದು ಮಧುಮಗಳ ಹೋಲುತ್ತಿತ್ತು
ಮೂಡಣದಿ ನೇಸರನ ನಗೆಮೊಗದ ಶ್ರೀಕಾಂತಿ
ಬಿಳಿಯ ಮೋಡದ ಹಿಂದೆ ಹೊಳೆಯುತ್ತಿತ್ತು || ಒಂದು ||
ಹುಲ್ಲೆಸಳು ಹೂಕಪಳೆ ಮುತ್ತು ಹನಿಗಳ ಮಿಂಚು
ಸೊಡರಿನಲಿ ಆರತಿಯ ಬೆಳಗುತ್ತಿತ್ತು
ಕೊರಲುಕ್ಕಿ ಹಾಡುತಿಹ ಚಿಕ್ಕ ಪಕ್ಕಿಯ ಬಳಗ
ಶುಭಮಸ್ತು ಶುಭಮಸ್ತು ಎನ್ನುತ್ತಿತ್ತು || ಒಂದು ||
ತಳಿರ ತೋರಣದಲ್ಲಿ ಬಳ್ಳಿ ಬಾಣಗಳಲ್ಲಿ
ದುಂಬಿಗಳ ಓಂಕಾರ ಹೊಮ್ಮುತ್ತಿತ್ತು
ಹಚ್ಚ ಹಸುರಿನ ಪಚ್ಚೆ ನೆಲಗಟ್ಟಿನಂಗಳದಿ
ಚಿಟ್ಟೆ ರಿಂಗಣದುಣಿತ ಹಾಕುತ್ತಿತ್ತು || ಒಂದು ||
ಉಷೆಯ ನುಂಟದಪಿನಲಿ ಹರ್ಷ ಬಾಷ್ಪಗಳಂತೆ
ಮರದ ಹನಿ ತಟಪಟನೆ ಉದುರುತ್ತಿತ್ತು
ಸೃಷ್ಟಿ ಲೀಲೆಯೊಳಿಂತು ತಲ್ಲೀನವಾದ ಮನ
ಮುಂಬಾಳ ಸವಿಗನಸ ನೆನೆಯುತ್ತಿತ್ತು || ಒಂದು ||
ಈ ಬಾನು ಈ ಚುಕ್ಕಿ ಈ ಹೂವು ಈ ಹಕ್ಕಿ
ಈ ಬಾನು ಈ ಚುಕ್ಕಿ ಈ ಹೂವು ಈ ಹಕ್ಕಿ
ತೇಲಿ ಸಾಗುವ ಮುಗಿಲು ಹರುಷ ಉಕ್ಕಿ
ಯಾರು ಇಟ್ಟರು ಇವನು ಹೀಗೆ ಇಲ್ಲಿ
ತುದಿಮೊದಲು ತಿಳಿಯದೀ ನೀಲಿಯಲಿ || ಈ ಬಾನು ||
ಒಂದೊಂದು ಹೂವಿಗೂ ಒಂದೊಂದು ಬಣ್ಣ
ಒಂದೊಂದು ಜೀವಕೂ ಒಂದೊಂದು ಕಣ್ಣ
ಯಾವುದೋ ಬಗೆಯಲ್ಲಿ ಎಲ್ಲರಿಗೂ ಅನ್ನ
ಕೊಟ್ಟ ಕರುಣೆಯ ಮೂಲ ಮರೆಸಿಹುದು ತನ್ನ || ಈ ಬಾನು ||
ನೂರಾರು ನದಿ ಕುಡಿದು ಮೀರದ ಕಡಲು
ಬೋರೆಂದು ಸುರಿ ಸುರಿದು ಆರದ ಮುಗಿಲು
ಸೇರಿಯೂ ಕೋಟಿ ತಾರೆ ತುಂಬದ ಬಯಲು
ಯಾರದೀ ಮಾಯೆ ಯಾವ ಬಿಂಬದ ನೆರಳು || ಈ ಬಾನು ||
ಹೊರಗಿರುವ ಪರಿಯೆಲ್ಲ ಅಡಗಿಹುದೇ ಒಳಗೆ
ಹುಡುಕಿದರೆ ಕೀಲಿ ಕೈ ಸಿಗದೆ ಎದೆಯೊಳಗೆ
ತಿಳಿಯದಲೆದರಲ್ಲಿ ಕುಳಿತಿರುವೆ ನೀನೇ
ಎನ್ನುವರು ನನಗೀಗ ಸೋಜಿಗವು ನಾನೇ || ಈ ಬಾನು ||
ತೇಲಿ ಸಾಗುವ ಮುಗಿಲು ಹರುಷ ಉಕ್ಕಿ
ಯಾರು ಇಟ್ಟರು ಇವನು ಹೀಗೆ ಇಲ್ಲಿ
ತುದಿಮೊದಲು ತಿಳಿಯದೀ ನೀಲಿಯಲಿ || ಈ ಬಾನು ||
ಒಂದೊಂದು ಹೂವಿಗೂ ಒಂದೊಂದು ಬಣ್ಣ
ಒಂದೊಂದು ಜೀವಕೂ ಒಂದೊಂದು ಕಣ್ಣ
ಯಾವುದೋ ಬಗೆಯಲ್ಲಿ ಎಲ್ಲರಿಗೂ ಅನ್ನ
ಕೊಟ್ಟ ಕರುಣೆಯ ಮೂಲ ಮರೆಸಿಹುದು ತನ್ನ || ಈ ಬಾನು ||
ನೂರಾರು ನದಿ ಕುಡಿದು ಮೀರದ ಕಡಲು
ಬೋರೆಂದು ಸುರಿ ಸುರಿದು ಆರದ ಮುಗಿಲು
ಸೇರಿಯೂ ಕೋಟಿ ತಾರೆ ತುಂಬದ ಬಯಲು
ಯಾರದೀ ಮಾಯೆ ಯಾವ ಬಿಂಬದ ನೆರಳು || ಈ ಬಾನು ||
ಹೊರಗಿರುವ ಪರಿಯೆಲ್ಲ ಅಡಗಿಹುದೇ ಒಳಗೆ
ಹುಡುಕಿದರೆ ಕೀಲಿ ಕೈ ಸಿಗದೆ ಎದೆಯೊಳಗೆ
ತಿಳಿಯದಲೆದರಲ್ಲಿ ಕುಳಿತಿರುವೆ ನೀನೇ
ಎನ್ನುವರು ನನಗೀಗ ಸೋಜಿಗವು ನಾನೇ || ಈ ಬಾನು ||
Wednesday, May 14, 2008
ಶ್ರಾವಣಾ ಬಂತು ಕಾಡಿಗೆ
(ಹಾಡುಪಾಡು - ಕವನ ಸಂಕಲನ)
ಶ್ರಾವಣಾ ಬಂತು ಕಾಡಿಗೆ| ಬಂತು ನಾಡಿಗೆ|
ಬಂತು ಬೀಡಿಗೆ| ಶ್ರಾವಣಾ ಬಂತು || ಪಲ್ಲವಿ ||
ಕಡಲಿಗೆ ಬಂತು ಶ್ರಾವಣಾ| ಕುಣಿಧ್ಹಾಂಗ ರಾವಣಾ|
ಕುಣಿದಾವ ಗಾಳಿ| ಭೈರವನ ರೂಪತಾಳಿ || ಅನುಪಲ್ಲವಿ ||
ಶ್ರಾವಣಾ ಬಂತು ಘಟ್ಟಕ್ಕ| ರಾಜ್ಯಪಟ್ಟಕ್ಕ|
ಬಾನು ಮಟ್ಟಕ್ಕ|
ಏರ್ಯಾವ ಮುಗಿಲು| ರವಿ ಕಾಣೆ ಹಾಡೆಹಗಲು|
ಶ್ರಾವಣಾ ಬಂತು ಹೊಳಿಗಳಿಗೆ| ಅದೆ ಶುಭಗಳಿಗೆ|
ಹೊಳಿಗೆ ಮತ್ತ ಮಳಿಗೆ|
ಆಗ್ಯೇದ ಲಗ್ನ| ಅದರಾಗ ಭೂಮಿ ಮಗ್ನ||
ಶ್ರಾವಣಾ ಬಂತು ಊರಿಗೆ| ಕೆರಿ ಕೇರಿಗೆ|
ಹೊಡೆದ ಝೂರಿಗೆ|
ಜೋಕಾಲಿ ಏರಿ| ಅಡರ್ಯಾವ ಮರಕ ಹಾರಿ|
ಶ್ರಾವಣಾ ಬಂತು ಮನಿಮನಿಗೆ| ಕೂಡಿ ದನಿದನಿಗೆ|
ಮನದ ನನಿಕೊನಿಕೊನಿಗೆ|
ಒಡೆದಾವ ಹಾಡೂ| ರಸ ಉಕ್ಕತಾವ ನೋಡು||
ಶ್ರಾವಣಾ ಬಂತು.
ಬೆಟ್ಟ ತೊಟ್ಟಾವ ಕುತನಿಯ ಅಂಗಿ|
ಹಸಿರು ನೋಡ ತಂಗಿ|
ಹೊರಟಾವೆಲ್ಲೊ ಜಂಗಿ|
ಜಾತ್ರಿಗೇನೋ| ನೆರೆದsದ ಇಲ್ಲೆ ತಾನೋ||
ಬನಬನ ನೋಡು ಈಗ ಹ್ಯಾಂಗ|
ಮದುವಿ ಮಗನ್ಹಾಂಗ
ತಲಿಗೆ ಬಾಸಿಂಗ|
ಕಟ್ಟಿಕೊಂಡೂ| ನಿಂತಾವ ಹರ್ಷಗೊಂಡು||
ಹಸಿರ್ಯ್ಟ್ಟ ಬಸುರಿಯ ಹಾಂಗ|
ನೆಲಾ ಹೊಲಾ ಹ್ಯಾಂಗ|
ಅರಿಸಿನಾ ಒಡೆಧಾಂಗ|
ಹೊಮ್ಮತಾವ| ಬಂಗಾರ ಚಿಮ್ಮತಾವ||
ಗುಡ್ಡ ದುಡ್ಡ ಸ್ಥಾವರಲಿಂಗ|
ಅವಕ ಅಭ್ಯಂಗ|
ಎರಿತಾವನ್ನೊ ಹಾಂಗ|
ಕೂಡ್ಯಾವ ಮೋಡ| ಸುತ್ತೆಲ್ಲ ನೋಡ ನೋಡ||
ನಾಡೆಲ್ಲ ಏರಿಯ ವಾರಿ||
ಹರಿತಾವ ಝರಿ|
ಹಾಲಿನ ತೊರಿ|
ಈಗ ಯಾಕ| ನೆಲಕೆಲ್ಲ ಕುಡಿಸಲಾಕ||
ಶ್ರಾವಣಾ ಬಂತು.
ಜಗದ್ಗುರು ಹುಟ್ಟಿದ ಮಾಸ|
ಕಟ್ಟಿ ನೂರು ವೇಷ|
ಕೊಟ್ಟ ಸಂತೋಷ|
ಕುಣಿತದ ತಾನsದ ದಣಿತದ|
ಶ್ರಾವಣಾ ಬಂತು ಕಾಡಿಗೆ| ಬಂತು ನಾಡಿಗೆ|
ಬಂತು ಬೀಡಿಗೆ| ಶ್ರಾವಣಾ ಬಂತು||
ಶ್ರಾವಣಾ ಬಂತು ಕಾಡಿಗೆ| ಬಂತು ನಾಡಿಗೆ|
ಬಂತು ಬೀಡಿಗೆ| ಶ್ರಾವಣಾ ಬಂತು || ಪಲ್ಲವಿ ||
ಕಡಲಿಗೆ ಬಂತು ಶ್ರಾವಣಾ| ಕುಣಿಧ್ಹಾಂಗ ರಾವಣಾ|
ಕುಣಿದಾವ ಗಾಳಿ| ಭೈರವನ ರೂಪತಾಳಿ || ಅನುಪಲ್ಲವಿ ||
ಶ್ರಾವಣಾ ಬಂತು ಘಟ್ಟಕ್ಕ| ರಾಜ್ಯಪಟ್ಟಕ್ಕ|
ಬಾನು ಮಟ್ಟಕ್ಕ|
ಏರ್ಯಾವ ಮುಗಿಲು| ರವಿ ಕಾಣೆ ಹಾಡೆಹಗಲು|
ಶ್ರಾವಣಾ ಬಂತು ಹೊಳಿಗಳಿಗೆ| ಅದೆ ಶುಭಗಳಿಗೆ|
ಹೊಳಿಗೆ ಮತ್ತ ಮಳಿಗೆ|
ಆಗ್ಯೇದ ಲಗ್ನ| ಅದರಾಗ ಭೂಮಿ ಮಗ್ನ||
ಶ್ರಾವಣಾ ಬಂತು ಊರಿಗೆ| ಕೆರಿ ಕೇರಿಗೆ|
ಹೊಡೆದ ಝೂರಿಗೆ|
ಜೋಕಾಲಿ ಏರಿ| ಅಡರ್ಯಾವ ಮರಕ ಹಾರಿ|
ಶ್ರಾವಣಾ ಬಂತು ಮನಿಮನಿಗೆ| ಕೂಡಿ ದನಿದನಿಗೆ|
ಮನದ ನನಿಕೊನಿಕೊನಿಗೆ|
ಒಡೆದಾವ ಹಾಡೂ| ರಸ ಉಕ್ಕತಾವ ನೋಡು||
ಶ್ರಾವಣಾ ಬಂತು.
ಬೆಟ್ಟ ತೊಟ್ಟಾವ ಕುತನಿಯ ಅಂಗಿ|
ಹಸಿರು ನೋಡ ತಂಗಿ|
ಹೊರಟಾವೆಲ್ಲೊ ಜಂಗಿ|
ಜಾತ್ರಿಗೇನೋ| ನೆರೆದsದ ಇಲ್ಲೆ ತಾನೋ||
ಬನಬನ ನೋಡು ಈಗ ಹ್ಯಾಂಗ|
ಮದುವಿ ಮಗನ್ಹಾಂಗ
ತಲಿಗೆ ಬಾಸಿಂಗ|
ಕಟ್ಟಿಕೊಂಡೂ| ನಿಂತಾವ ಹರ್ಷಗೊಂಡು||
ಹಸಿರ್ಯ್ಟ್ಟ ಬಸುರಿಯ ಹಾಂಗ|
ನೆಲಾ ಹೊಲಾ ಹ್ಯಾಂಗ|
ಅರಿಸಿನಾ ಒಡೆಧಾಂಗ|
ಹೊಮ್ಮತಾವ| ಬಂಗಾರ ಚಿಮ್ಮತಾವ||
ಗುಡ್ಡ ದುಡ್ಡ ಸ್ಥಾವರಲಿಂಗ|
ಅವಕ ಅಭ್ಯಂಗ|
ಎರಿತಾವನ್ನೊ ಹಾಂಗ|
ಕೂಡ್ಯಾವ ಮೋಡ| ಸುತ್ತೆಲ್ಲ ನೋಡ ನೋಡ||
ನಾಡೆಲ್ಲ ಏರಿಯ ವಾರಿ||
ಹರಿತಾವ ಝರಿ|
ಹಾಲಿನ ತೊರಿ|
ಈಗ ಯಾಕ| ನೆಲಕೆಲ್ಲ ಕುಡಿಸಲಾಕ||
ಶ್ರಾವಣಾ ಬಂತು.
ಜಗದ್ಗುರು ಹುಟ್ಟಿದ ಮಾಸ|
ಕಟ್ಟಿ ನೂರು ವೇಷ|
ಕೊಟ್ಟ ಸಂತೋಷ|
ಕುಣಿತದ ತಾನsದ ದಣಿತದ|
ಶ್ರಾವಣಾ ಬಂತು ಕಾಡಿಗೆ| ಬಂತು ನಾಡಿಗೆ|
ಬಂತು ಬೀಡಿಗೆ| ಶ್ರಾವಣಾ ಬಂತು||
. ದ.ರಾ. ಬೇಂದ್ರೆ (ಅಂಬಿಕಾತನಯದತ್ತ) | ನಾದಲೀಲೆ
(ನಾದಲೀಲೆ - ಕವನ ಸಂಗ್ರಹ)
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ || ಪಲ್ಲವಿ||
ಸಂಸಾರ ಸಾಗರದಾಗ ಲೆಕ್ಕವಿಲ್ಲದಷ್ಟು ದುಃಖದ ಬಂಡಿ
ನಾ ಬಲ್ಲೆ ನನಗೆ ಗೊತ್ತಿಲ್ಲದಿದ್ದರೂ ಎಲ್ಲಿ ಆಚೆಯಾ ದಂಡಿ
ಮಲಗಿರುವ ಕೂಸು ಮಲಗಿರಲಿ ಅಲ್ಲಿ, ಮುಂದಿನದು ದೇವರ ಚಿತ್ತ
ನಾ ತಡೀಲಾರೆ ಅದು, ಯಾಕ ನೋಡತೀ ಮತ್ತ ಮತ್ತ ಇತ್ತ?
ತಂಬಲs ಹಾಕದ ತುಂಬ ಕೆಂಪು ಗಿಡಗಡಕನಕಣ್ಣಿನ ಹಾಂಗ
ಇದ್ದಂಥ ತುಟಿಯ ಬಣ್ಣೆತ್ತ ಹಾರಿತು? ಯಾವ ಗಾಳಿಗೆ, ಹೀಂಗ
ಈ ಗದ್ದ, ಗಲ್ಲ, ಹಣಿ, ಕಣ್ಣುಕಂಡು ಮಾರೀಗೆ ಮಾರಿಯ ರೀತಿ
ಸಾವನs ತನ್ನ ಕೈ ಸವರಿತಲ್ಲಿ, ಬಂತೆನಗ ಇಲ್ಲದ ಭೀತಿ,
ಧಾರ್ಈಲೆ ನೆನೆದ ಕೈ ಹಿಡಿದೆ ನೀನು, ತಣ್ಣsಗ ಅಂತ ತಿಳಿದು
ಬಿಡವೊಲ್ಲಿ ಇನ್ನುನೂ, ಬೂದಿಮುಚ್ಚಿದ ಕೆಂಡ ಇದಂತ ಹೊಳೆದು
ಮುಗಿಲsನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲಿ ಎಲ್ಲಿನ್ನs
ಆ ಗಾದಿ ಮಾತು ನಂಬಿ, ನಾನು ದೇವರಂತ ತಿಳಿದಿಯೇನ ನೀ ನನ್ನ.
ಇಬ್ಬನ್ನಿ ತೊಳೆದರೂ ಹಾಲು ಮೆತ್ತಿದಾ ಕವಳಿಕಂಟಿಯಾ ಹಣ್ಣು
ಹೊಳೆ ಹೊಳೆವ ಹಾಂಗಿರುವ ಕಣ್ಣಿರುವ, ಹೆಣ್ಣ, ಹೇಳು ನಿನ್ನವೇನ ಈ ಕಣ್ಣು?
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲs
ಹುಣ್ಣವೀ ಚಂದಿರನ ಹೆಣ ಬಂತೊ ಮುಗಿಲಾಗ ತೇಲತ ಹಗಲ!
ನಿನ ಕಣ್ಣಿನ್ಯಾಗ ಕಾಲೂರಿ ಮಳೆಯು, ನಡ ನಡಕ ಹುಚ್ಚನಗಿ ಯಾಕ?
ಹನಿ ಒಡೆಯಲಿಕ್ಕೆ ಬಂದಂಥ ಮೋಡ ತಡಧಾಂಗ ಗಾಳಿಯ ನೆವಕ
ಅತ್ತಾರ ಅತ್ತುಬಿಡು, ಹೊನಲು ಬರಲಿ, ನಕ್ಯಾಕ ಮರಸತೀ ದುಕ್ಕ?
ಎವೆಬಡಿಸಿ ಕೆಡವು, ಬಿರಿಗಣ್ಣು ಬ್ಯಾಡ, ತುಟಿಕಚ್ಚಿ ಹಿಡಿಯದಿರು ಬಿಕ್ಕ
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ || ಪಲ್ಲವಿ||
ಸಂಸಾರ ಸಾಗರದಾಗ ಲೆಕ್ಕವಿಲ್ಲದಷ್ಟು ದುಃಖದ ಬಂಡಿ
ನಾ ಬಲ್ಲೆ ನನಗೆ ಗೊತ್ತಿಲ್ಲದಿದ್ದರೂ ಎಲ್ಲಿ ಆಚೆಯಾ ದಂಡಿ
ಮಲಗಿರುವ ಕೂಸು ಮಲಗಿರಲಿ ಅಲ್ಲಿ, ಮುಂದಿನದು ದೇವರ ಚಿತ್ತ
ನಾ ತಡೀಲಾರೆ ಅದು, ಯಾಕ ನೋಡತೀ ಮತ್ತ ಮತ್ತ ಇತ್ತ?
ತಂಬಲs ಹಾಕದ ತುಂಬ ಕೆಂಪು ಗಿಡಗಡಕನಕಣ್ಣಿನ ಹಾಂಗ
ಇದ್ದಂಥ ತುಟಿಯ ಬಣ್ಣೆತ್ತ ಹಾರಿತು? ಯಾವ ಗಾಳಿಗೆ, ಹೀಂಗ
ಈ ಗದ್ದ, ಗಲ್ಲ, ಹಣಿ, ಕಣ್ಣುಕಂಡು ಮಾರೀಗೆ ಮಾರಿಯ ರೀತಿ
ಸಾವನs ತನ್ನ ಕೈ ಸವರಿತಲ್ಲಿ, ಬಂತೆನಗ ಇಲ್ಲದ ಭೀತಿ,
ಧಾರ್ಈಲೆ ನೆನೆದ ಕೈ ಹಿಡಿದೆ ನೀನು, ತಣ್ಣsಗ ಅಂತ ತಿಳಿದು
ಬಿಡವೊಲ್ಲಿ ಇನ್ನುನೂ, ಬೂದಿಮುಚ್ಚಿದ ಕೆಂಡ ಇದಂತ ಹೊಳೆದು
ಮುಗಿಲsನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲಿ ಎಲ್ಲಿನ್ನs
ಆ ಗಾದಿ ಮಾತು ನಂಬಿ, ನಾನು ದೇವರಂತ ತಿಳಿದಿಯೇನ ನೀ ನನ್ನ.
ಇಬ್ಬನ್ನಿ ತೊಳೆದರೂ ಹಾಲು ಮೆತ್ತಿದಾ ಕವಳಿಕಂಟಿಯಾ ಹಣ್ಣು
ಹೊಳೆ ಹೊಳೆವ ಹಾಂಗಿರುವ ಕಣ್ಣಿರುವ, ಹೆಣ್ಣ, ಹೇಳು ನಿನ್ನವೇನ ಈ ಕಣ್ಣು?
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲs
ಹುಣ್ಣವೀ ಚಂದಿರನ ಹೆಣ ಬಂತೊ ಮುಗಿಲಾಗ ತೇಲತ ಹಗಲ!
ನಿನ ಕಣ್ಣಿನ್ಯಾಗ ಕಾಲೂರಿ ಮಳೆಯು, ನಡ ನಡಕ ಹುಚ್ಚನಗಿ ಯಾಕ?
ಹನಿ ಒಡೆಯಲಿಕ್ಕೆ ಬಂದಂಥ ಮೋಡ ತಡಧಾಂಗ ಗಾಳಿಯ ನೆವಕ
ಅತ್ತಾರ ಅತ್ತುಬಿಡು, ಹೊನಲು ಬರಲಿ, ನಕ್ಯಾಕ ಮರಸತೀ ದುಕ್ಕ?
ಎವೆಬಡಿಸಿ ಕೆಡವು, ಬಿರಿಗಣ್ಣು ಬ್ಯಾಡ, ತುಟಿಕಚ್ಚಿ ಹಿಡಿಯದಿರು ಬಿಕ್ಕ
ಗಮಗಮಾ ಗಮಾಡಿಸತಾವ ಮಲ್ಲಿಗಿ
ಗಮಗಮಾ ಗಮಾಡಿಸತಾವ ಮಲ್ಲಿಗಿ
(ಗಂಗಾವತರಣ - ಕವನ ಸಂಗ್ರಹ)
ಗಮಗಮಾ ಗಮಾಡಿಸತಾವ ಮಲ್ಲಿಗಿ| ನೀವು ಹೊರಟಿದ್ದೀಗ ಎಲ್ಲಿಗೆ?
ಗಮಗಮಾ........... || ಪಲ್ಲವಿ||
ತುಳುಕ್ಯಾಡತಾವ ತೂಕಡಿಕಿ
ಎವಿ ಅಪ್ಪತಾವ ಕಣ್ಣ ದುಡುಕಿ
ಕನಸು ತೇಲಿ ಬರತಾವ ಹುಡುಕಿ||
ನೀವು ಹೊರಟಿದ್ದೀಗ ಎಲ್ಲೆಗೆ?
ಚಿಕ್ಕಿ ತೋರಸ್ತಾನ ಚಾಚಿ ಬೆರಳ
ಚಂದ್ರಾಮ ಕನ್ನಡಿ ಹರಳ
ಮನಸೋತು ಆಯಿತು ಮರುಳ||
ನೀವು ಹೊರಟಿದ್ದೀಗ ಎಲ್ಲೆಗೆ?
ಗಾಳಿತಬ್ಬತಾವ ಹೂಗಂಪು
ಚಂದ್ರನ ತೆಕ್ಕಿಗಿದೆ ತಂಪು
ನಿಮ ಕಂಡರ ಕವದಾವ ಜೊಂಪು||
ನೀವು ಹೊರಟಿದ್ದೀಗ ಎಲ್ಲಿಗೆ?
ನೆರಳಲ್ಲಾಡತಾವ ಮರದ ಬುಡಕs
ಕೆರಿ ತೆರಿ ನೂಗತಾವ ದಡsಕ
ಹೀಂಗೆ ಬಿಟ್ಟು ಇಲ್ಲಿ ನನ್ನ ನಡsಕ||
ನೀವು ಹೊರಟಿದ್ದೀಗ ಎಲ್ಲಿಗೆ?
ನಮ್ಮ ನಿಮ್ಮ ಒಂದತನದಾಗ
ಹಾಡು ಹುಟ್ಟಿ ಒಂದು ಮನದಾಗ
ಬೆಳದಿಂಗಳಾತು ಬನದಾಗ|| ನೀವು ಹೊರಟಿದ್ದೀಗ ಎಲ್ಲಿಗೆ?
ನಾವು ಬಂದೆವದಿಲ್ಲಿದಿಲ್ಲಿಗೆ
ಬಾಯಿ ಬಿಟ್ಟವಲ್ಲ ಮಲ್ಲಿಗೆ
ನೀರೊಡೆಡಿತಲ್ಲ ಕಲ್ಲಿಗೆ
ನೀವು ಹೊರಟಿದ್ದೀಗ ಎಲ್ಲಿಗೆ?||
ಬಂತ್ಯಾಕ ನಿಮಗೆ ಇಂದ ಮುನಿಸು
ಬೀಳಲಿಲ್ಲ ನಮಗೆ ಇದರ ಕನಸು
ರಾಯ ತಿಳಿಯಲಿಲ್ಲ ನಿಮ್ಮ ಮನಸು
ನೀವು ಹೊರಟಿದ್ದೀಗ ಎಲ್ಲಿಗೆ?||
(ಗಂಗಾವತರಣ - ಕವನ ಸಂಗ್ರಹ)
ಗಮಗಮಾ ಗಮಾಡಿಸತಾವ ಮಲ್ಲಿಗಿ| ನೀವು ಹೊರಟಿದ್ದೀಗ ಎಲ್ಲಿಗೆ?
ಗಮಗಮಾ........... || ಪಲ್ಲವಿ||
ತುಳುಕ್ಯಾಡತಾವ ತೂಕಡಿಕಿ
ಎವಿ ಅಪ್ಪತಾವ ಕಣ್ಣ ದುಡುಕಿ
ಕನಸು ತೇಲಿ ಬರತಾವ ಹುಡುಕಿ||
ನೀವು ಹೊರಟಿದ್ದೀಗ ಎಲ್ಲೆಗೆ?
ಚಿಕ್ಕಿ ತೋರಸ್ತಾನ ಚಾಚಿ ಬೆರಳ
ಚಂದ್ರಾಮ ಕನ್ನಡಿ ಹರಳ
ಮನಸೋತು ಆಯಿತು ಮರುಳ||
ನೀವು ಹೊರಟಿದ್ದೀಗ ಎಲ್ಲೆಗೆ?
ಗಾಳಿತಬ್ಬತಾವ ಹೂಗಂಪು
ಚಂದ್ರನ ತೆಕ್ಕಿಗಿದೆ ತಂಪು
ನಿಮ ಕಂಡರ ಕವದಾವ ಜೊಂಪು||
ನೀವು ಹೊರಟಿದ್ದೀಗ ಎಲ್ಲಿಗೆ?
ನೆರಳಲ್ಲಾಡತಾವ ಮರದ ಬುಡಕs
ಕೆರಿ ತೆರಿ ನೂಗತಾವ ದಡsಕ
ಹೀಂಗೆ ಬಿಟ್ಟು ಇಲ್ಲಿ ನನ್ನ ನಡsಕ||
ನೀವು ಹೊರಟಿದ್ದೀಗ ಎಲ್ಲಿಗೆ?
ನಮ್ಮ ನಿಮ್ಮ ಒಂದತನದಾಗ
ಹಾಡು ಹುಟ್ಟಿ ಒಂದು ಮನದಾಗ
ಬೆಳದಿಂಗಳಾತು ಬನದಾಗ|| ನೀವು ಹೊರಟಿದ್ದೀಗ ಎಲ್ಲಿಗೆ?
ನಾವು ಬಂದೆವದಿಲ್ಲಿದಿಲ್ಲಿಗೆ
ಬಾಯಿ ಬಿಟ್ಟವಲ್ಲ ಮಲ್ಲಿಗೆ
ನೀರೊಡೆಡಿತಲ್ಲ ಕಲ್ಲಿಗೆ
ನೀವು ಹೊರಟಿದ್ದೀಗ ಎಲ್ಲಿಗೆ?||
ಬಂತ್ಯಾಕ ನಿಮಗೆ ಇಂದ ಮುನಿಸು
ಬೀಳಲಿಲ್ಲ ನಮಗೆ ಇದರ ಕನಸು
ರಾಯ ತಿಳಿಯಲಿಲ್ಲ ನಿಮ್ಮ ಮನಸು
ನೀವು ಹೊರಟಿದ್ದೀಗ ಎಲ್ಲಿಗೆ?||
ಮೈಸೂರ ಮಲ್ಲಿಗೆ- ಹಕ್ಕಿಯ ಹಾಡಿಗೆ ತಲೆದೂಗುವ ಹೂವು
ಹಕ್ಕಿಯ ಹಾಡಿಗೆ ತಲೆದೂಗುವ ಹೂವು ನಾನಾಗುವ ಆಸೆ
ಹಕ್ಕಿಯ ಹಾಡಿಗೆ ತಲೆದೂಗುವ ಹೂವು ನಾನಾಗುವ ಆಸೆ
ಹಸುವಿನ ಕೊರಳಿನ ಗೆಜ್ಜೆಯ ದನಿಯು ನಾನಾಗುವ ಆಸೆ
ಹಬ್ಬಿದ ಕಾಮನ ಬಿಲ್ಲಿನ ಮೇಲಿನ ಮುಗಿಲಾಗುವ ಆಸೆ
ಚಿನ್ನದ ಬಣ್ಣದ ಜಿಂಕೆಯ ಕಣ್ಣಿನ ಮಿಂಚಾಗುವ ಆಸೆ
ತೋಟದ ಕಂಪಿನ ಉಸಿರಲಿ ತೇಲುವ ಜೇನಾಗುವ ಆಸೆ
ಕಡಲಿನ ನೀಲಿಯ ನೀರಲಿ ಬಳುಕುವ ಮೀನಾಗುವ ಆಸೆ
ಸಿಡಿಲನು ಕಾರುವ ಬಿರುಮಳೆಗಂಜದೆ ಮುನ್ನೆಡೆಯುವ ಆಸೆ
ನಾಳೆಯ ಬದುಕಿನ ಇರುಳಿನ ತಿರುವಿಗೆ ದೀಪವನಿಡುವಾಸೆ
ಮಣ್ಣಿನ ಕೊಡುಗೆಗೆ ನೋವಿಗೆ ನಲಿವಿಗೆ ಕನ್ನಡಿ ಹಿಡಿವಾಸೆ
ಮಾನವ ಹೃದಯದ ಕರುಣೆಗೆ ಒಲವಿಗೆ ದನಿಗೂಡಿಸುವಾಸೆ
ಹಕ್ಕಿಯ ಹಾಡಿಗೆ ತಲೆದೂಗುವ ಹೂವು ನಾನಾಗುವ ಆಸೆ
ಹಸುವಿನ ಕೊರಳಿನ ಗೆಜ್ಜೆಯ ದನಿಯು ನಾನಾಗುವ ಆಸೆ
ಹಬ್ಬಿದ ಕಾಮನ ಬಿಲ್ಲಿನ ಮೇಲಿನ ಮುಗಿಲಾಗುವ ಆಸೆ
ಚಿನ್ನದ ಬಣ್ಣದ ಜಿಂಕೆಯ ಕಣ್ಣಿನ ಮಿಂಚಾಗುವ ಆಸೆ
ತೋಟದ ಕಂಪಿನ ಉಸಿರಲಿ ತೇಲುವ ಜೇನಾಗುವ ಆಸೆ
ಕಡಲಿನ ನೀಲಿಯ ನೀರಲಿ ಬಳುಕುವ ಮೀನಾಗುವ ಆಸೆ
ಸಿಡಿಲನು ಕಾರುವ ಬಿರುಮಳೆಗಂಜದೆ ಮುನ್ನೆಡೆಯುವ ಆಸೆ
ನಾಳೆಯ ಬದುಕಿನ ಇರುಳಿನ ತಿರುವಿಗೆ ದೀಪವನಿಡುವಾಸೆ
ಮಣ್ಣಿನ ಕೊಡುಗೆಗೆ ನೋವಿಗೆ ನಲಿವಿಗೆ ಕನ್ನಡಿ ಹಿಡಿವಾಸೆ
ಮಾನವ ಹೃದಯದ ಕರುಣೆಗೆ ಒಲವಿಗೆ ದನಿಗೂಡಿಸುವಾಸೆ
ಕೆ.ಎಸ್.ನರಸಿಂಹಸ್ವಾಮಿ ಸಿರಿಗೆರೆಯ ನೀರಲ್ಲಿ
ಸಿರಿಗೆರೆಯ ನೀರಲ್ಲಿ ಬಿರಿದ ತಾವರೆಯಲ್ಲಿ ಕೆಂಪಾಗಿ ನಿನ್ನ ಹೆಸರು
ಗುಡಿಯ ಗೋಪುರದಲ್ಲಿ ನೆರೆವ ದೀಪಗಳಲ್ಲಿ ಬೆಳಕಾಗಿ ನಿನ್ನ ಹೆಸರು
ನಿನ್ನ ಹೆಸರು…
ಜೋಯಿಸರಾ ಹೊಲದೊಳಗೆ ಕುಣಿವ ಕೆಂಗರುವಿನ ಕಣ್ಣಲ್ಲಿ ನಿನ್ನ ಹೆಸರು
ತಾಯ ಮೊಲೆಯಲ್ಲಿ ಕರು ತುಟಿಯಿಟ್ಟು ಚೆಲ್ಲಿಸಿದ ಹಾಲಲ್ಲಿ ನಿನ್ನ ಹೆಸರು
ನಿನ್ನ ಹೆಸರು…
ಹೂಬನದ ಬಿಸಿಲಲ್ಲಿ ನರ್ತಿಸುವ ನವಿಲಿನ ದನಿಯಲ್ಲಿ ನಿನ್ನ ಹೆಸರು
ಒಂದಾಳೆ ಹೂವಲ್ಲಿ ಹೊರಟ ಪರಿಮಳದಲ್ಲಿ ಉಯ್ಯಾಲೆ ನಿನ್ನ ಹೆಸರು
ಉಯ್ಯಾಲೆ ನಿನ್ನಾ ಹೆಸರು…
ಮರೆತ ತುಟಿಗೆ ಬಾರದೆ ಮೋಡಮರೆಯೊಳಗೆ ಬೆಳದಿಂಗಳೊ ನಿನ್ನ ಹೆಸರು
ನೆನೆದಾಗ ಕಣ್ಣ ಮುಂದೆಲ್ಲಾ ಹುಣ್ಣಿಮೆಯೊಳಗೆ ಹೂಬಾಣ ನಿನ್ನ ಹೆಸರು
ನಿನ್ನ ಹೆಸರು… ನಿನ್ನ ಹೆಸರು
ನಿನ್ನ ಹೆಸರು… ನಿನ್ನ ಹೆಸರು
ಗುಡಿಯ ಗೋಪುರದಲ್ಲಿ ನೆರೆವ ದೀಪಗಳಲ್ಲಿ ಬೆಳಕಾಗಿ ನಿನ್ನ ಹೆಸರು
ನಿನ್ನ ಹೆಸರು…
ಜೋಯಿಸರಾ ಹೊಲದೊಳಗೆ ಕುಣಿವ ಕೆಂಗರುವಿನ ಕಣ್ಣಲ್ಲಿ ನಿನ್ನ ಹೆಸರು
ತಾಯ ಮೊಲೆಯಲ್ಲಿ ಕರು ತುಟಿಯಿಟ್ಟು ಚೆಲ್ಲಿಸಿದ ಹಾಲಲ್ಲಿ ನಿನ್ನ ಹೆಸರು
ನಿನ್ನ ಹೆಸರು…
ಹೂಬನದ ಬಿಸಿಲಲ್ಲಿ ನರ್ತಿಸುವ ನವಿಲಿನ ದನಿಯಲ್ಲಿ ನಿನ್ನ ಹೆಸರು
ಒಂದಾಳೆ ಹೂವಲ್ಲಿ ಹೊರಟ ಪರಿಮಳದಲ್ಲಿ ಉಯ್ಯಾಲೆ ನಿನ್ನ ಹೆಸರು
ಉಯ್ಯಾಲೆ ನಿನ್ನಾ ಹೆಸರು…
ಮರೆತ ತುಟಿಗೆ ಬಾರದೆ ಮೋಡಮರೆಯೊಳಗೆ ಬೆಳದಿಂಗಳೊ ನಿನ್ನ ಹೆಸರು
ನೆನೆದಾಗ ಕಣ್ಣ ಮುಂದೆಲ್ಲಾ ಹುಣ್ಣಿಮೆಯೊಳಗೆ ಹೂಬಾಣ ನಿನ್ನ ಹೆಸರು
ನಿನ್ನ ಹೆಸರು… ನಿನ್ನ ಹೆಸರು
ನಿನ್ನ ಹೆಸರು… ನಿನ್ನ ಹೆಸರು
ಅಂತರಂಗದ ಮೃದಂಗ
ಅಂತರಂಗದ ಮೃದಂಗ ಅಂತು ತೋಂ ತನಾನ
ಚಿತ್ತ ತಾಳ ಬಾರಿಸುತಲಿದ್ದು ಝಂ ಝಣಣ ನಾ
ನೆನಪು ತಂತಿ ಮೀಟುತಿತ್ತು ತೋಂತನನ ತಾನ ತೋಂತನನ ತಾನ ತೋಂತನನ ತಾನ ನ
ಹಲವು ಜನ್ಮದಿಂದ ಬಂದ ಯಾವುದೋನೋ ಧ್ಯಾನ
ಏಕನಾದದಂಥದೊಂದು ತಾನದ ವಿತಾನ
ತನಗೆ ತಾನೇ ಸೋಲುತಿಹುದು ನೂಲುತಿಹುದು ಗಾನ || ೩ || || ಅಂ ||
ಕಲ್ಪದಾದಿಯಲ್ಲಿ ನನ್ನ ನಿನ್ನ ವಿರಹವಾಗಿ
ಎಲ್ಲೋ ಏನೋ ನಿನ್ನ ಹುಡುಕಿ ಕಾಂಬ ಕಣ್ಣೆ ಹೋಗಿ
ಮರೆವೆಗೊಂದು ಬಿದ್ದೆ ನಾನು ನೆಲದ ಮಣ್ಣು ತಾಗಿ || ೩ || || ಅಂ ||
ಕತ್ತಲಲ್ಲಿ ಬೆಳಕು ಮಿಂಚಿ ಪಡೆತಿತೇಳು ಬಣ್ಣ
ಮೂಕ ಮೌನ ತೂಕ ಮೀರಿ ದನಿಯು ಹಬ್ಬಿತಣ್ಣ
ಕಣ್ಣ ಮಣ್ಣ ಕೂಡಲಲ್ಲಿ ಹಾಡು ಕಟ್ಟಿತಣ್ಣ || ೩ || || ಅಂ ||
Posted by Sathyanarayana.R.G at 7:48 AM 0 comments
ಚಿತ್ತ ತಾಳ ಬಾರಿಸುತಲಿದ್ದು ಝಂ ಝಣಣ ನಾ
ನೆನಪು ತಂತಿ ಮೀಟುತಿತ್ತು ತೋಂತನನ ತಾನ ತೋಂತನನ ತಾನ ತೋಂತನನ ತಾನ ನ
ಹಲವು ಜನ್ಮದಿಂದ ಬಂದ ಯಾವುದೋನೋ ಧ್ಯಾನ
ಏಕನಾದದಂಥದೊಂದು ತಾನದ ವಿತಾನ
ತನಗೆ ತಾನೇ ಸೋಲುತಿಹುದು ನೂಲುತಿಹುದು ಗಾನ || ೩ || || ಅಂ ||
ಕಲ್ಪದಾದಿಯಲ್ಲಿ ನನ್ನ ನಿನ್ನ ವಿರಹವಾಗಿ
ಎಲ್ಲೋ ಏನೋ ನಿನ್ನ ಹುಡುಕಿ ಕಾಂಬ ಕಣ್ಣೆ ಹೋಗಿ
ಮರೆವೆಗೊಂದು ಬಿದ್ದೆ ನಾನು ನೆಲದ ಮಣ್ಣು ತಾಗಿ || ೩ || || ಅಂ ||
ಕತ್ತಲಲ್ಲಿ ಬೆಳಕು ಮಿಂಚಿ ಪಡೆತಿತೇಳು ಬಣ್ಣ
ಮೂಕ ಮೌನ ತೂಕ ಮೀರಿ ದನಿಯು ಹಬ್ಬಿತಣ್ಣ
ಕಣ್ಣ ಮಣ್ಣ ಕೂಡಲಲ್ಲಿ ಹಾಡು ಕಟ್ಟಿತಣ್ಣ || ೩ || || ಅಂ ||
Posted by Sathyanarayana.R.G at 7:48 AM 0 comments
ದೀಪವು ನಿನ್ನದೆ ಗಾಳಿಯು ನಿನ್ನದೆ ಆರದಿರಲಿ ಬೆಳಕು
ದೀಪವು ನಿನ್ನದೆ ಗಾಳಿಯು ನಿನ್ನದೆ ಆರದಿರಲಿ ಬೆಳಕು
ಕಡಲು ನಿನ್ನದೆ ಹಡಗು ನಿನ್ನದೆ ಮುಳುಗದಿರಲಿ ಬದುಕು || ದೀ ||
ಬೆಟ್ಟವು ನಿನ್ನದೆ ಬಯಲು ನಿನ್ನದೆ ಹಬ್ಬಿನದಲಿ ಪ್ರೀತಿ
ನೆಳಲೊ ಬಿಸಿಲೊ ಎಲ್ಲವು ನಿನ್ನದೆ ಇರಲಿ ಏಕ ರೀತಿ || ದೀ ||
ಆಗೊಂದು ಸಿಡಿಲು ಈಗೊಂದು ಮುಗಿಲು ನಿನಗೆ ಅಲಂಕಾರ
ಅಲ್ಲೊಂದು ಹಕ್ಕಿ ಇಲ್ಲೊಂದು ಮುಗುಳು ನಿನಗೆ ನಮಸ್ಕಾರ || ದೀ ||
ಅಲ್ಲಿ ರಣದುಂದುಭಿ ಇಲ್ಲೊಂದು ವೀಣೆ ನಿನ್ನ ಪ್ರತಿಧ್ವನಿ
ಆ ಮಹಾಕಾವ್ಯ ಈ ಭಾವಗೀತೆ ನಿನ್ನ ಪದ ಧ್ವನಿಯೆ || ದೀ ||
ಕಡಲು ನಿನ್ನದೆ ಹಡಗು ನಿನ್ನದೆ ಮುಳುಗದಿರಲಿ ಬದುಕು || ದೀ ||
ಬೆಟ್ಟವು ನಿನ್ನದೆ ಬಯಲು ನಿನ್ನದೆ ಹಬ್ಬಿನದಲಿ ಪ್ರೀತಿ
ನೆಳಲೊ ಬಿಸಿಲೊ ಎಲ್ಲವು ನಿನ್ನದೆ ಇರಲಿ ಏಕ ರೀತಿ || ದೀ ||
ಆಗೊಂದು ಸಿಡಿಲು ಈಗೊಂದು ಮುಗಿಲು ನಿನಗೆ ಅಲಂಕಾರ
ಅಲ್ಲೊಂದು ಹಕ್ಕಿ ಇಲ್ಲೊಂದು ಮುಗುಳು ನಿನಗೆ ನಮಸ್ಕಾರ || ದೀ ||
ಅಲ್ಲಿ ರಣದುಂದುಭಿ ಇಲ್ಲೊಂದು ವೀಣೆ ನಿನ್ನ ಪ್ರತಿಧ್ವನಿ
ಆ ಮಹಾಕಾವ್ಯ ಈ ಭಾವಗೀತೆ ನಿನ್ನ ಪದ ಧ್ವನಿಯೆ || ದೀ ||
ಎದೆ ತುಂಬಿ ಹಾಡಿದೆನು
ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು || ಎದೆ ||
ಇಂದು ನಾ ಹಾಡಿದರೂ ಅಂದಿನಂತೆಯೆ ಕುಳಿತು
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ || ಎದೆ ||
ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಕೇಳುವವರಿಹರೆಂದು ನಾ ಬಲ್ಲೆನದರಿಂದ
ಹಾಡುವೆನು ಮೈದುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರೂ ನನಗಿಲ್ಲ ಚಿಂತೆ
ಎದೆ ತುಂಬಿ ಹಾಡಿದೆನು ಇಂದು ನಾನು
ಮನವಿಟ್ಟು ಕೇಳಿದಿರಿ ಇಲ್ಲಿ ನೀವು..
ಮನವಿಟ್ಟು ಕೇಳಿದಿರಿ ಅಲ್ಲಿ ನೀವು || ಎದೆ ||
ಇಂದು ನಾ ಹಾಡಿದರೂ ಅಂದಿನಂತೆಯೆ ಕುಳಿತು
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ || ಎದೆ ||
ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಕೇಳುವವರಿಹರೆಂದು ನಾ ಬಲ್ಲೆನದರಿಂದ
ಹಾಡುವೆನು ಮೈದುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರೂ ನನಗಿಲ್ಲ ಚಿಂತೆ
ಎದೆ ತುಂಬಿ ಹಾಡಿದೆನು ಇಂದು ನಾನು
ಮನವಿಟ್ಟು ಕೇಳಿದಿರಿ ಇಲ್ಲಿ ನೀವು..
ಯಾವ ಮೋಹನ ಮುರಳಿ
ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನ್ನು
ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು || ಯಾವ ||
ಹೂವು ಹಾಸಿಗೆ ಚಂದ್ರ ಚಂದನ ಬಾಹುಬಂಧನ ಚುಂಬನ
ಬಯಕೆ ತೋಟದ ಬೇಲಿಯೊಳಗೆ ಕರಣ ಕಣದಿ ರಿಂಗಣ || ಯಾವ ||
ಸಪ್ತ ಸಾಗರದಾಚೆಯೆಲ್ಲೋ ಸುಪ್ತ ಸಾಗರ ಕಾದಿದೆ
ಒಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗೂ ಹಾಯಿತೇ || ಯಾವ ||
ವಿವಶವಾಯಿತು ಪ್ರಾಣ ಪರವಶವು ನಿನ್ನೀ ಚೇತನ
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತೊಡೆವುದೇ ಜೀವನ
ಯಾವ ಮೋಹನ ಮುರಳಿ ಕರೆಯಿತು ಇದ್ದಕ್ಕಿದ್ದೆಡೆ ನಿನ್ನನ್ನು
ಯಾವ ಬೃಂದಾವನವು ಚಾಚಿತು ತನ್ನ ಮಿಂಚಿನ ಕೈಯನು || ಯಾವ ||
ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು || ಯಾವ ||
ಹೂವು ಹಾಸಿಗೆ ಚಂದ್ರ ಚಂದನ ಬಾಹುಬಂಧನ ಚುಂಬನ
ಬಯಕೆ ತೋಟದ ಬೇಲಿಯೊಳಗೆ ಕರಣ ಕಣದಿ ರಿಂಗಣ || ಯಾವ ||
ಸಪ್ತ ಸಾಗರದಾಚೆಯೆಲ್ಲೋ ಸುಪ್ತ ಸಾಗರ ಕಾದಿದೆ
ಒಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗೂ ಹಾಯಿತೇ || ಯಾವ ||
ವಿವಶವಾಯಿತು ಪ್ರಾಣ ಪರವಶವು ನಿನ್ನೀ ಚೇತನ
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತೊಡೆವುದೇ ಜೀವನ
ಯಾವ ಮೋಹನ ಮುರಳಿ ಕರೆಯಿತು ಇದ್ದಕ್ಕಿದ್ದೆಡೆ ನಿನ್ನನ್ನು
ಯಾವ ಬೃಂದಾವನವು ಚಾಚಿತು ತನ್ನ ಮಿಂಚಿನ ಕೈಯನು || ಯಾವ ||
ಎಲ್ಲಿ ಜಾರಿತೋ ಮನವು ಎಲ್ಲೆ ಮೀರಿತೋ
ಎಲ್ಲಿ ಜಾರಿತೋ ಮನವು ಎಲ್ಲೆ ಮೀರಿತೋ
ಎಲ್ಲಿ ಅಲೆಯುತಿಹುದೋ ಏಕೆ ನಿಲ್ಲದಾಯಿತೋ || ಎಲ್ಲಿ ||
ದೂರದೊಂದು ತೀರದಿಂದ ತೇಲಿ ಪಾರಿಜಾತ ಗಂಧ
ದಾಟಿ ಬಂತು ಬೇಲಿಸಾಲ ಮೀಟಿ ಹಳೆಯ ಮಧುರ ನೋವ || ಎಲ್ಲಿ ||
ಬಾನಿನಲ್ಲಿ ಒಂಟಿ ತಾರೆ ಸೋನೆ ಸುರಿವ ಇರುಳ ಮೋರೆ
ಕತ್ತಲಲ್ಲಿ ಕುಳಿತು ಒಳಗೆ ಬಿಕ್ಕುತಿಹಳು ಯಾರೋ ನೀರೆ || ಎಲ್ಲಿ ||
ಹಿಂದೆ ಯಾವ ಜನ್ಮದಲ್ಲೋ ಮಿಂದ ಪ್ರೇಮ ಜಲದ ಕಂಪೋ
ಬಂದು ಚೀರುವೆದೆಯ ಭಾವ ಹೇಳಲಾರೆ ತಾಳಲಾರೆ || ಎಲ್ಲಿ ||
ಎಲ್ಲಿ ಅಲೆಯುತಿಹುದೋ ಏಕೆ ನಿಲ್ಲದಾಯಿತೋ || ಎಲ್ಲಿ ||
ದೂರದೊಂದು ತೀರದಿಂದ ತೇಲಿ ಪಾರಿಜಾತ ಗಂಧ
ದಾಟಿ ಬಂತು ಬೇಲಿಸಾಲ ಮೀಟಿ ಹಳೆಯ ಮಧುರ ನೋವ || ಎಲ್ಲಿ ||
ಬಾನಿನಲ್ಲಿ ಒಂಟಿ ತಾರೆ ಸೋನೆ ಸುರಿವ ಇರುಳ ಮೋರೆ
ಕತ್ತಲಲ್ಲಿ ಕುಳಿತು ಒಳಗೆ ಬಿಕ್ಕುತಿಹಳು ಯಾರೋ ನೀರೆ || ಎಲ್ಲಿ ||
ಹಿಂದೆ ಯಾವ ಜನ್ಮದಲ್ಲೋ ಮಿಂದ ಪ್ರೇಮ ಜಲದ ಕಂಪೋ
ಬಂದು ಚೀರುವೆದೆಯ ಭಾವ ಹೇಳಲಾರೆ ತಾಳಲಾರೆ || ಎಲ್ಲಿ ||
ಕಾಣದ ಕಡಲಿಗೆ ಹಂಬಲಿಸಿದೆ ಮನ
ಕಾಣದ ಕಡಲಿಗೆ ಹಂಬಲಿಸಿದೆ ಮನ
ಕಾಣಬಲ್ಲೆನೆ ಒಂದು ದಿನ ಕಡಲೊಳು
ಕೂಡಬಲ್ಲೆನೆ ಒಂದು ದಿನ || ಕಾ ||
ಕಾಣದ ಕಡಲಿನ ಮೊರೆತದ ಜೋಗುಳ ಒಳಗಿವಿಗಿಂದು ಕೇಳುತಿದೆ
ನನ್ನ ಕಲ್ಪನೆಯು ತನ್ನ ಕಡಲನೆ ಛಿದ್ರಿಸಿ ಚಿಂತಿಸಿ ಸುರಿಯುತಿದೆ
ಎಲ್ಲಿರುವುದೋ ಅದು ಎಂತಿರುವುದೋ ಅದು
ನೋಡಬಲ್ಲೆನೆ ಒಂದು ದಿನ ಕಡಲನು ಕೂಡಬಲ್ಲೆನೆ ಒಂದು ದಿನ || ಕಾಣದ ||
ಸಾವಿರ ಹೊಳೆಗಳು ತುಂಬಿ ಹರಿದರೂ ಒಂದೇ ಸಮನಾಗಿಹುದಂತೆ
ಸುನಿಲ ವಿಸ್ತರ ತರಂಗ ಶೋಭಿತ ಗಂಭೀರಾಂಬುಧಿ ತಾನಂತೆ
ಮುನ್ನೀರಂತೆ ಅಪಾರವಂತೆ
ಕಾಣಬಲ್ಲೆನೆ ಒಂದು ದಿನ ಅದರೊಳು ಕರಗಲಾರೆನೆ ಒಂದು ದಿನ || ಕಾಣದ ||
ಜಟಿಲ ಕಾನನದ ಕುಟಿಲ ಪಥಗಳಲಿ ಹರಿವ ತೊರೆಯು ನಾನು
ಎಂದಿಗಾದರೂ ಕಾಣದ ಕಡಲಿಗೆ ಸೇರಬಲ್ಲೆ ನೀನು
ಸೇರಬಹುದೇ ನಾನು ಕಡಲ ನೀಲಿಯೊಳು ಕರಗಬಹುದೇ ನಾನು || ಕಾಣದ ||
ಕಾಣಬಲ್ಲೆನೆ ಒಂದು ದಿನ ಕಡಲೊಳು
ಕೂಡಬಲ್ಲೆನೆ ಒಂದು ದಿನ || ಕಾ ||
ಕಾಣದ ಕಡಲಿನ ಮೊರೆತದ ಜೋಗುಳ ಒಳಗಿವಿಗಿಂದು ಕೇಳುತಿದೆ
ನನ್ನ ಕಲ್ಪನೆಯು ತನ್ನ ಕಡಲನೆ ಛಿದ್ರಿಸಿ ಚಿಂತಿಸಿ ಸುರಿಯುತಿದೆ
ಎಲ್ಲಿರುವುದೋ ಅದು ಎಂತಿರುವುದೋ ಅದು
ನೋಡಬಲ್ಲೆನೆ ಒಂದು ದಿನ ಕಡಲನು ಕೂಡಬಲ್ಲೆನೆ ಒಂದು ದಿನ || ಕಾಣದ ||
ಸಾವಿರ ಹೊಳೆಗಳು ತುಂಬಿ ಹರಿದರೂ ಒಂದೇ ಸಮನಾಗಿಹುದಂತೆ
ಸುನಿಲ ವಿಸ್ತರ ತರಂಗ ಶೋಭಿತ ಗಂಭೀರಾಂಬುಧಿ ತಾನಂತೆ
ಮುನ್ನೀರಂತೆ ಅಪಾರವಂತೆ
ಕಾಣಬಲ್ಲೆನೆ ಒಂದು ದಿನ ಅದರೊಳು ಕರಗಲಾರೆನೆ ಒಂದು ದಿನ || ಕಾಣದ ||
ಜಟಿಲ ಕಾನನದ ಕುಟಿಲ ಪಥಗಳಲಿ ಹರಿವ ತೊರೆಯು ನಾನು
ಎಂದಿಗಾದರೂ ಕಾಣದ ಕಡಲಿಗೆ ಸೇರಬಲ್ಲೆ ನೀನು
ಸೇರಬಹುದೇ ನಾನು ಕಡಲ ನೀಲಿಯೊಳು ಕರಗಬಹುದೇ ನಾನು || ಕಾಣದ ||
ಓ ನನ್ನ ಚೇತನ
ಓ ನನ್ನ ಚೇತನ ಆಗು ನೀ ಅನಿಕೇತನ
ರೂಪರೂಪಗಳನು ದಾಟಿ
ನಾಮ ಕೋಟಿಗಳನು ಮೀಟಿ
ಎದೆಯ ಬಿರಿಯೆ ಭಾವ ದೀಟಿ || ಓ ನನ್ನ ||
ನೂರು ಮತದ ಹೊಟ್ಟತೂರಿ
ಎಲ್ಲ ತತ್ವದೆಲ್ಲೆ ಮೀರಿ
ನಿರ್ದಿಗಂತವಾಗಿ ಏರಿ || ಓ ನನ್ನ ||
ಎಲ್ಲಿಯೂ ನಿಲ್ಲದಿರು
ಮನೆಯನೆಂದು ಕಟ್ಟದಿರು
ಕೊನೆಯನೆಂದು ಮುಟ್ಟದಿರು || ಓ ನನ್ನ ||
ಅನಂತ ತಾನನಂತವಾಗಿ
ಆಗುತಿಹನೆ ನಿತ್ಯಯೋಗಿ
ಅನಂತ ನೀ ಅನಂತವಾಗು
ಆಗು ಆಗು ಆಗು ಆಗು || ಓ ನನ್ನ ||
ರೂಪರೂಪಗಳನು ದಾಟಿ
ನಾಮ ಕೋಟಿಗಳನು ಮೀಟಿ
ಎದೆಯ ಬಿರಿಯೆ ಭಾವ ದೀಟಿ || ಓ ನನ್ನ ||
ನೂರು ಮತದ ಹೊಟ್ಟತೂರಿ
ಎಲ್ಲ ತತ್ವದೆಲ್ಲೆ ಮೀರಿ
ನಿರ್ದಿಗಂತವಾಗಿ ಏರಿ || ಓ ನನ್ನ ||
ಎಲ್ಲಿಯೂ ನಿಲ್ಲದಿರು
ಮನೆಯನೆಂದು ಕಟ್ಟದಿರು
ಕೊನೆಯನೆಂದು ಮುಟ್ಟದಿರು || ಓ ನನ್ನ ||
ಅನಂತ ತಾನನಂತವಾಗಿ
ಆಗುತಿಹನೆ ನಿತ್ಯಯೋಗಿ
ಅನಂತ ನೀ ಅನಂತವಾಗು
ಆಗು ಆಗು ಆಗು ಆಗು || ಓ ನನ್ನ ||
ಜೋಗದ ಸಿರಿ
ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ
ನಿತ್ಯಹರಿದ್ವರ್ಣ ವನದ ತೇಗ ಗಂಧ ತರುಗಳಲ್ಲಿ
ನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆ
ನಿತ್ಯೋತ್ಸವ ತಾಯೆ ನಿತ್ಯೋತ್ಸವ || ಜೋಗದ ||
ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿ
ಗತಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ
ಓಲೆಗರಿಯ ಸಿರಿಗಳಲ್ಲಿ ದೇಗುಲಗಳ ಬಿತ್ತಿಗಳಲಿ
ನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆ
ನಿತ್ಯೋತ್ಸವ ತಾಯೆ ನಿತ್ಯೋತ್ಸವ || ಜೋಗದ ||
ಹಲವೆನ್ನದ ಹಿರಿಮೆಯೆ ಕುಲವೆನ್ನದ ಗರಿಮೆಯೆ
ಸದ್ವಿಕಾಸ ಶೀಲ ನುಡಿಯ ಲೋಕಾವೃತ ಸೀಮೆಯೆ
ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ
ನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆ
ನಿತ್ಯೋತ್ಸವ ತಾಯೆ ನಿತ್ಯೋತ್ಸವ || ಜೋಗದ ||
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ
ನಿತ್ಯಹರಿದ್ವರ್ಣ ವನದ ತೇಗ ಗಂಧ ತರುಗಳಲ್ಲಿ
ನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆ
ನಿತ್ಯೋತ್ಸವ ತಾಯೆ ನಿತ್ಯೋತ್ಸವ || ಜೋಗದ ||
ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿ
ಗತಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ
ಓಲೆಗರಿಯ ಸಿರಿಗಳಲ್ಲಿ ದೇಗುಲಗಳ ಬಿತ್ತಿಗಳಲಿ
ನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆ
ನಿತ್ಯೋತ್ಸವ ತಾಯೆ ನಿತ್ಯೋತ್ಸವ || ಜೋಗದ ||
ಹಲವೆನ್ನದ ಹಿರಿಮೆಯೆ ಕುಲವೆನ್ನದ ಗರಿಮೆಯೆ
ಸದ್ವಿಕಾಸ ಶೀಲ ನುಡಿಯ ಲೋಕಾವೃತ ಸೀಮೆಯೆ
ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ
ನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆ
ನಿತ್ಯೋತ್ಸವ ತಾಯೆ ನಿತ್ಯೋತ್ಸವ || ಜೋಗದ ||
bhavageethe
ಅತ್ತಿತ್ತ ನೋಡದಿರು ಅತ್ತು ಹೊರಳಾಡದಿರು
ನಿದ್ದೆ ಬರುವಳು ಹೊದ್ದು ಮಲಗು ಮಗುವೇ
ಜೋ ಜೋಜೋಜೋ...
ಸುತ್ತಿ ಹೊರಳಾಡದಿರು ಮತ್ತೆ ಹಟ ಹೂಡದಿರು
ನಿದ್ದೆ ಬರುವಳು ಕದ್ದು ಮಲಗು ಮಗುವೇ
ಜೋ ಜೋಜೋಜೋ..
ಮಲಗು ಚೆಲ್ವಿನ ತೆರೆಯೆ ಮಲಗು ಒಲ್ಮೆಯ ಸಿರಿಯೆ
ಮಲಗು ತೊಟ್ಟಿಲ ಸಿರಿಯೆ ದೇವರಂತೆ
ಮಲಗು ಮುದ್ದಿನ ಗಿಣಿಯೆ ಮಲಗು ಮುತ್ತಿನ ಮಣಿಯೆ
ಮಲಗು ಚಂದಿರನೂರ ಕೂಗುವೆಯಂತೆ || ಅತ್ತಿತ್ತ ||
ತಾರೆಗಳ ಜರತಾರಿ ಅಂಗಿ ತೊಡಿಸುವರಂತೆ
ಚಂದಿರನ ತಂಗಿಯರು ನಿನ್ನ ಕರೆದು
ಹೂವ ಮುಡಿಸುವರಂತೆ ಹಾಲ ಕುಡಿಸುವರಂತೆ
ವೀಣೆ ನುಡಿಸುವರಂತೆ ಸುತ್ತ ನೆರೆದು || ಅತ್ತಿತ್ತ ||
ಬಣ್ಣ ಬಣ್ಣದ ಕನಸು ಕರಗುವುದು ಬಲು ಬೇಗ
ಹಗಲು ಬರುವನು ಬೆಳ್ಳಿ ಮುಗಿಲ ನಡುವೆ
ಚಿನ್ನದಂಬಾರಿಯಲಿ ನಿನ್ನ ಅಳುಕು ವರಾಮ
ಪಟ್ಟದಾನೆಯ ಮೇಲೆ ಪುಟ್ಟ ಮಗುವೆ || ಅತ್ತಿತ್ತ ||
ನಿದ್ದೆ ಬರುವಳು ಹೊದ್ದು ಮಲಗು ಮಗುವೇ
ಜೋ ಜೋಜೋಜೋ...
ಸುತ್ತಿ ಹೊರಳಾಡದಿರು ಮತ್ತೆ ಹಟ ಹೂಡದಿರು
ನಿದ್ದೆ ಬರುವಳು ಕದ್ದು ಮಲಗು ಮಗುವೇ
ಜೋ ಜೋಜೋಜೋ..
ಮಲಗು ಚೆಲ್ವಿನ ತೆರೆಯೆ ಮಲಗು ಒಲ್ಮೆಯ ಸಿರಿಯೆ
ಮಲಗು ತೊಟ್ಟಿಲ ಸಿರಿಯೆ ದೇವರಂತೆ
ಮಲಗು ಮುದ್ದಿನ ಗಿಣಿಯೆ ಮಲಗು ಮುತ್ತಿನ ಮಣಿಯೆ
ಮಲಗು ಚಂದಿರನೂರ ಕೂಗುವೆಯಂತೆ || ಅತ್ತಿತ್ತ ||
ತಾರೆಗಳ ಜರತಾರಿ ಅಂಗಿ ತೊಡಿಸುವರಂತೆ
ಚಂದಿರನ ತಂಗಿಯರು ನಿನ್ನ ಕರೆದು
ಹೂವ ಮುಡಿಸುವರಂತೆ ಹಾಲ ಕುಡಿಸುವರಂತೆ
ವೀಣೆ ನುಡಿಸುವರಂತೆ ಸುತ್ತ ನೆರೆದು || ಅತ್ತಿತ್ತ ||
ಬಣ್ಣ ಬಣ್ಣದ ಕನಸು ಕರಗುವುದು ಬಲು ಬೇಗ
ಹಗಲು ಬರುವನು ಬೆಳ್ಳಿ ಮುಗಿಲ ನಡುವೆ
ಚಿನ್ನದಂಬಾರಿಯಲಿ ನಿನ್ನ ಅಳುಕು ವರಾಮ
ಪಟ್ಟದಾನೆಯ ಮೇಲೆ ಪುಟ್ಟ ಮಗುವೆ || ಅತ್ತಿತ್ತ ||
THE LONG WALK
In 1941, the author and a small group of fellow prisoners escaped a Soviet labor camp. Their march out of Siberia, through China, the Gobi Desert, Tibet, and over the Himalayas to British India is a remarkable statement about man's desire to be free.With a new Afterword by the author, and the author's Foreword to the Polish edition, this new edition of The Long Walk is destined to outrank its classic status. (6 X 9, 256 pages, map)"One of the epic treks of the human race. Shackleton, Franklin, Amundsen...history is filled with people who have crossed immense distances and survived despite horrific odds. None of them, however, has achieved the extraordinary feat Rawicz has recorded. He and his companions crossed an entire continent--the Siberian arctic, the Gobi desert and then the Himalayas--with nothing but an ax, a knife, and a week's worth of food...His account is so filled with despair and suffering it is almost unreadable. But it must be read--and re-read."--Sebastian Junger, author of The Perfect Storm"The Long Walk is a book that I absolutely could not put down and one that I will never forget..."--Stephen Ambrose
Subscribe to:
Posts (Atom)
